ಜಿಲ್ಲೆಗಳು

ಮಡಿಕೇರಿ : ಶಬ್ಧ ಮಾಲಿನ್ಯ ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ, ನೆಮ್ಮದಿ ಬದುಕು ಸಾಗಿಸಲಾಗದೆ ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಹೆಚ್ ಜಿ ಕುಟ್ಟಪ್ಪ ಎಂಬುವರು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಚೌಡ್ಲು ಗ್ರಾಮದ ಮಂಜುನಾಥ ಅಟೋ ವರ್ಕ್ಸ್ ನಿಂದ ಕಳೆದ ಐದು ವರ್ಷಗಳಿಂದ ತಮಗೂ ತಮ್ಮ ಪತ್ನಿಗೂ ತೀವ್ರ ಮಾನಸಿಕ ಹಿಂಸೆಯಾಗಿದ್ದು ಎಲ್ಲಿಯೂ ನ್ಯಾಯ ದೊರಕಿಲ್ಲ ಎಂದು ಕುಟ್ಟಪ್ಪ ಅವರು ಆರೋಪಿಸಿದ್ದಾರೆ.

೨೦೧೧ರಲ್ಲಿ ಕೃಷಿ ಇಲಾಖೆಯಿಂದ ನಿವೃತ್ತಿಯಾದ ಬಳಿಕ ಕುಟ್ಟಪ್ಪ ಅವರು ಚೌಡ್ಲು ಗ್ರಾಮದ ತಮ್ಮ ಸ್ವಂತ ನಿವಾಸಲ್ಲಿ ನೆಲೆಸಿರುತ್ತಾರೆ. ಇದೇ ಮನೆಯ ಸಮೀಪದಲ್ಲೇ ಮಂಜುನಾಥ ಅಟೋ ವರ್ಕ್ಸ್ ಇದ್ದು ತೀವ್ರ ಶಬ್ಧ ಮತ್ತು ವಾಯು ಮಾಲಿನ್ಯ ಉಂಟಾಗುತ್ತಿದೆ ಎಂದು ಕುಟ್ಟಪ್ಪ ದೂರಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಗ್ಯಾರೇಜ್ ಸಿಬ್ಬಂದಿ ತಮಗೆ ಜೀವ ಬೆದರಿಕೆ ಒಡ್ಡಿದ್ದು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದಂತಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ. ಗ್ಯಾರೇಜ್ ಸಿಬ್ಬಂದಿ ಬೆಳಗ್ಗಿನಿಂದ ತಡರಾತ್ರಿಯವರೆಗೂ ವಿಪರೀತ ಶಬ್ಧ ಮಾಡುವುದು, ವಾಹನಗಳನ್ನು ಸ್ಟಾರ್ಟ್ ಮಾಡಿ ಬೇಕೆಂದೇ ರೈಸ್ ಮಾಡುವುದು, ಗ್ಯಾರೇಜ್ ತ್ಯಾಜ್ಯಗಳಿಗೆ ಬೇಕೆಂದೇ ಮನೆಯ ಸಮೀಪ ಬೆಂಕಿ ಹಾಕಿ ಹೊಗೆ ಎಬ್ಬಿಸುವಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದರ ವಿರುದ್ಧ ಕೊಡಗು ಪೊಲೀಸ್ ವರಿಷ್ಠಾಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಮಾಲಿನ್ಯ ನಿಯಂತ್ರಣ ಮಂಡಳಿ, ಚೌಡ್ಲು ಗ್ರಾಮ ಪಂಚಾಯಿತಿ ಮತ್ತು ಆಗಿನ ಉಸ್ತುವಾರಿ ಸಚಿವರಾಗಿದ್ದ ಸಾರಾ ಮಹೇಶ್ ಅವರಿಗೆ ಲಿಖಿತ ದೂರನ್ನು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಜುನಾಥ ಗ್ಯಾರೇಜ್, ಭೂ ಪರಿವರ್ತನೆ ಮಾಡದ ಹಿನ್ನೆಲೆಯಲ್ಲಿ ಚೌಡ್ಲು ಪಂಚಾಯಿತಿ ಗ್ಯಾರೇಜ್‌ನ ಲೈಸೆನ್ಸ್ ನವೀಕರಣಗೊಳಿಸುವುದಿಲ್ಲ. ಅಲ್ಲದೆ, ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡ ಸ್ಥಳ ಪರಿಶೀಲನೆ ನಡೆಸಿ ತ್ಯಾಜ್ಯ ಸುಡುವುದರಿಂದ ವಾಯುಮಾಲಿನ್ಯ ವಾಗಿರುವುದನ್ನು ದೃಢೀಕರಿಸಿ ಗ್ರಾಮ ಪಂಚಾಯಿತಿಗೆ ವರದಿ ನೀಡಿದೆ. ಅಲ್ಲದೆ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿ ೮೫ರ ಬದಿಯಲ್ಲೇ ಗ್ಯಾರೇಜ್ ಇದ್ದು ರಸದತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸಿಕೊಂಡು ವಾಹನಗಳ ಸಂಚಾರಕ್ಕೂ ಅಡ್ಡಿಯುಂಟು ಮಾಡುತ್ತಿರುವ ಆರೋಪವಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚೌಡ್ಲು ಗ್ರಾಮ ಪಂಚಾಯಿತಿ ಗ್ಯಾರೇಜ್ ಅನ್ನ ತೆರವು ಗೊಳಿಸಲು ನಿರ್ಣಯಕೈಗೊಂಡು, ಗ್ಯಾರೇಜ್‌ನ್ನ ಸ್ಥಳಾಂತರಿಸಲು ೨೦೨೧ರ ಮಾರ್ಚ್‌ನಲ್ಲಿ ಮೂರು ತಿಂಗಳು ಗಡುವು ನೀಡುತ್ತದೆ. ಈ ಗಡುವಿನ ವಿರುದ್ಧ ಗ್ಯಾರೇಜ್ ಮಾಲೀಕ ಮನೋಜ್ ಸೋಮವಾರಪೇಟೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುತ್ತಾರೆ. ಆದರೆ ನ್ಯಾಯಾಲಯ ಈ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದೂ ಸ್ಥಳೀಯ ಪ್ರಾಧಿಕಾರದ ವ್ಯಾಪ್ತಿಯಲ್ಲೇ ಬಗೆಹರಿಸಿಕೊಳ್ಳುವಂತೆ ಸೂಚಿಸುತ್ತದೆ. ಈ ಸಂದರ್ಭ ಚೌಡ್ಲು ಪಂಚಾಯಿತಿ ಸರ್ವ ಸದಸ್ಯರು ಗ್ಯಾರೇಜ್ ತೆರವಿಗೆ ಮುಂದಾದಾಗ ಇದಕ್ಕೆ ಸೋಮವಾರಪೇಟೆ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ತಡೆಯೊಡ್ಡಿದ್ದಾರೆ ಎಂದು ಕುಟ್ಟಪ್ಪ ದಂಪತಿ ಆರೋಪಿಸಿದ್ದಾರೆ.

ಇಷ್ಟಲ್ಲಾ ಆದರೂ ತಮಗೆ ನ್ಯಾಯ ದೊರಕದ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ತಮಗೆ ದಯಾಮರಣ ನೀಡುವಂತೆ ಕುಟ್ಟಪ್ಪ ದಂಪತಿ ಮನವಿ ಮಾಡಿದ್ದಾರೆ. ಜೀವನಪೂರ್ತಿ ಸರ್ಕಾರದ ಸೇವೆ ಮಾಡಿ ನಿವೃತ್ತಿ ನಂತರ ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದಂತಾಗಿದೆ, ಹಾಗಾಗಿ ತಮಗೆ ದಯಾ ಮರಣ ನೀಡುವಂತೆ ಅವರು ಬೇಡಿದ್ದಾರೆ.

andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

6 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

6 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

6 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

6 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

7 hours ago