ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮೃತದೇಹ ತಂದು ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಕೊಡಗು ಜಿಲ್ಲೆಯ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುರ್ಕರಟ್ಟಿಗೆ ತರಲಾಯಿತು.
ಕಡಗದಾಳು ಸರ್ಕಾರಿ ವಿದ್ಯಾಸಂಸ್ಥೆ ಮುಂಭಾಗದಿಂದ ಮೃತದೇಹವನ್ನು ತೆರೆದ ವಾಹನದಲ್ಲಿರಿಸಿ ಗೌರವ ಸಲ್ಲಿಸಲಾಯಿತು. ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಸಾರ್ವಜನಿಕರು ರಸ್ತೆಯ ಎರಡು ಬದಿಯಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆ ಮಾಡುವುದರೊಂದಿಗೆ ಗೌರವ ಸಲ್ಲಿಸಿದರು.
ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಐಎಸ್ಎಫ್ ಯೋಧರು ಪುಷ್ಪಗುಚ್ಚ ಇಟ್ಟು, ಸಹದ್ಯೋಗಿಗೆ ಗೌರವ ಸಲ್ಲಿಸಿದರು. ಪೊಲೀಸ್ ತಂಡ ಮೂರು ಸುತ್ತು ಗಾಳಿ ಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಶಾಸಕ ಕೆ.ಜಿ. ಬೋಪಯ್ಯ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಮಹೇಶ್ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸಾರ್ವಜನಿಕರು, ಕುಟುಂಬಸ್ಥರು ಅಂತಿಮ ದರ್ಶನ ಪಡೆದ ಬಳಿಕ ಕತ್ತಲೆಕಾಡು ಹಿಂದೂ ರುಧ್ರಭೂಮಿಯಲ್ಲಿ ಮಲಯಾಳಿ ವಿಧಿ ವಿಧಾನ ದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…