ಜಿಲ್ಲೆಗಳು

ಸರ್ಕಾರಿ ಗೌರವದೊಂದಿಗೆ ಯೋಧ ಕೆ.ಕೆ. ಶಿಜು ರವರ ಅಂತ್ಯಕ್ರಿಯೆ

ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್‌ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮೃತದೇಹ ತಂದು ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಕೊಡಗು ಜಿಲ್ಲೆಯ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುರ್ಕರಟ್ಟಿಗೆ ತರಲಾಯಿತು.
ಕಡಗದಾಳು ಸರ್ಕಾರಿ ವಿದ್ಯಾಸಂಸ್ಥೆ ಮುಂಭಾಗದಿಂದ ಮೃತದೇಹವನ್ನು ತೆರೆದ ವಾಹನದಲ್ಲಿರಿಸಿ ಗೌರವ ಸಲ್ಲಿಸಲಾಯಿತು. ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಸಾರ್ವಜನಿಕರು ರಸ್ತೆಯ ಎರಡು ಬದಿಯಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆ ಮಾಡುವುದರೊಂದಿಗೆ ಗೌರವ ಸಲ್ಲಿಸಿದರು.
ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಐಎಸ್‌ಎಫ್ ಯೋಧರು ಪುಷ್ಪಗುಚ್ಚ ಇಟ್ಟು, ಸಹದ್ಯೋಗಿಗೆ ಗೌರವ ಸಲ್ಲಿಸಿದರು. ಪೊಲೀಸ್ ತಂಡ ಮೂರು ಸುತ್ತು ಗಾಳಿ ಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಶಾಸಕ ಕೆ.ಜಿ. ಬೋಪಯ್ಯ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಮಹೇಶ್ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸಾರ್ವಜನಿಕರು, ಕುಟುಂಬಸ್ಥರು ಅಂತಿಮ ದರ್ಶನ ಪಡೆದ ಬಳಿಕ ಕತ್ತಲೆಕಾಡು ಹಿಂದೂ ರುಧ್ರಭೂಮಿಯಲ್ಲಿ ಮಲಯಾಳಿ ವಿಧಿ ವಿಧಾನ ದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago