ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ ನಿವಾಸಿ ಎಂ.ಕೆ. ಹರೀಶ್ ಕುಮಾರ ಎಂಬವರ ಪುತ್ರ ಟಿಂಬರ್ ಕೆಲಸ ಮಾಡಿಕೊಂಡಿರುವ ಎಂ.ಹೆಚ್. ಶಿವಕುಮಾರ್ ಬಂಧಿತ ಆರೋಪಿ.
ನ.೨೭ ರಂದು ಸಂಜೆ ಆಸತ್ರೆಯ ಸಿಬ್ಬಂದಿಯಂತೆ ಒಳನುಗ್ಗಿದ್ದ ಚೋರನೊಬ್ಬ ಆಸ್ಪತ್ರೆಯಿಡೀ ಸುಳಿದಾಡಿ ಕರ್ತವ್ಯನಿರತ ವೈದ್ಯರ ಕೊಠಡಿಯೊಳಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳು, ಇರಿಸಿದ್ದ ಬ್ಯಾಗ್ಗಳನ್ನು ಜಾಲಾಡಿ ಅದರೊಳಗಡೆ ಇದ್ದ ಹಣವನ್ನು ದೋಚಿದ್ದ. ಜೊತೆಗೆ ಒಂದು ಬ್ಯಾಗ್ನೊಳಗಡೆ ದೊರೆತ ದ್ವಿಚಕ್ರ ವಾಹನದ ಕೀಯನ್ನು ಕಸಿದು ಆಸ್ಪತ್ರೆಯ ಹೊರಾವರಣದಲ್ಲಿ ನಿಲ್ಲಿಸಿದ್ದ ವಾಹನವನ್ನು ಕದ್ದೊಯ್ದು ಪರಾರಿಯಾಗಿದ್ದನು.
ಈ ಸಂಬಂಧ ಮೈಸೂರಿನ ವೈದ್ಯ ವಿದ್ಯಾರ್ಥಿನಿ ತರಿಕೆರೆಯ ಸೃಷ್ಟಿ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಳ್ಳನ ಸೆರೆಗೆ ಬಲೆ ಬೀಸಿದ್ದರು. ಈ ಬಗ್ಗೆ ತನಿಖೆ ಮುಂದುವರಿಸಿದ ಠಾಣಾಧಿಕಾರಿ ಶ್ರೀನಿವಾಸ್ ನೇತೃತ್ವದ ಪೊಲೀಸರ ತಂಡ ಕಳ್ಳನ ಜಾಡು ಹಿಡಿದು ವಿರಾಜಪೇಟೆಯಲ್ಲಿ ಸೆರೆ ಹಿಡಿಯುವಲ್ಲಿಯಶಸ್ವಿಯಾಗಿದ್ದಾರೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಬ್ಯಾಗ್ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಕಳವು ಮಾಡಿದ್ದ ವಾಹನಕ್ಕೆ ಪೂಜೆ ಮಾಡಿಸಿದ್ದ ಆರೋಪಿ, ಹೂವು ಹಾಗೂ ರಿಬ್ಬನ್ ಅಂಟಿಸಿ ಸಿಂಗಾರ ಮಾಡಿ ತಾನೇ ಖರೀದಿಸಿದ ವಾಹನವೆಂದು ಜನರೆದುರು ಹೇಳಿಕೊಂಡು ಓಡಾಡುತ್ತಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದಾಗಿ ೧೫ ದಿನಗಳ ಒಳಗಡೆ ಆರೋಪಿ ಸೆರೆಮನೆ ಸೇರುವಂತಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…