ಜಿಲ್ಲೆಗಳು

ಆಸ್ಪತ್ರೆಗೆ ನುಗ್ಗಿ ಬ್ಯಾಗ್ ಕಳವು ಮಾಡಿದ್ದ ಆರೋಪಿ ಬಂಧನ

ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ ನಿವಾಸಿ ಎಂ.ಕೆ. ಹರೀಶ್ ಕುಮಾರ ಎಂಬವರ ಪುತ್ರ ಟಿಂಬರ್ ಕೆಲಸ ಮಾಡಿಕೊಂಡಿರುವ ಎಂ.ಹೆಚ್. ಶಿವಕುಮಾರ್ ಬಂಧಿತ ಆರೋಪಿ.
ನ.೨೭ ರಂದು ಸಂಜೆ ಆಸತ್ರೆಯ ಸಿಬ್ಬಂದಿಯಂತೆ ಒಳನುಗ್ಗಿದ್ದ ಚೋರನೊಬ್ಬ ಆಸ್ಪತ್ರೆಯಿಡೀ ಸುಳಿದಾಡಿ ಕರ್ತವ್ಯನಿರತ ವೈದ್ಯರ ಕೊಠಡಿಯೊಳಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳು, ಇರಿಸಿದ್ದ ಬ್ಯಾಗ್‌ಗಳನ್ನು ಜಾಲಾಡಿ ಅದರೊಳಗಡೆ ಇದ್ದ ಹಣವನ್ನು ದೋಚಿದ್ದ. ಜೊತೆಗೆ ಒಂದು ಬ್ಯಾಗ್‌ನೊಳಗಡೆ ದೊರೆತ ದ್ವಿಚಕ್ರ ವಾಹನದ ಕೀಯನ್ನು ಕಸಿದು ಆಸ್ಪತ್ರೆಯ ಹೊರಾವರಣದಲ್ಲಿ ನಿಲ್ಲಿಸಿದ್ದ ವಾಹನವನ್ನು ಕದ್ದೊಯ್ದು ಪರಾರಿಯಾಗಿದ್ದನು.
ಈ ಸಂಬಂಧ ಮೈಸೂರಿನ ವೈದ್ಯ ವಿದ್ಯಾರ್ಥಿನಿ ತರಿಕೆರೆಯ ಸೃಷ್ಟಿ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಳ್ಳನ ಸೆರೆಗೆ ಬಲೆ ಬೀಸಿದ್ದರು. ಈ ಬಗ್ಗೆ ತನಿಖೆ ಮುಂದುವರಿಸಿದ ಠಾಣಾಧಿಕಾರಿ ಶ್ರೀನಿವಾಸ್ ನೇತೃತ್ವದ ಪೊಲೀಸರ ತಂಡ ಕಳ್ಳನ ಜಾಡು ಹಿಡಿದು ವಿರಾಜಪೇಟೆಯಲ್ಲಿ ಸೆರೆ ಹಿಡಿಯುವಲ್ಲಿಯಶಸ್ವಿಯಾಗಿದ್ದಾರೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಕಳವು ಮಾಡಿದ್ದ ವಾಹನಕ್ಕೆ ಪೂಜೆ ಮಾಡಿಸಿದ್ದ ಆರೋಪಿ, ಹೂವು ಹಾಗೂ ರಿಬ್ಬನ್ ಅಂಟಿಸಿ ಸಿಂಗಾರ ಮಾಡಿ ತಾನೇ ಖರೀದಿಸಿದ ವಾಹನವೆಂದು ಜನರೆದುರು ಹೇಳಿಕೊಂಡು ಓಡಾಡುತ್ತಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದಾಗಿ ೧೫ ದಿನಗಳ ಒಳಗಡೆ ಆರೋಪಿ ಸೆರೆಮನೆ ಸೇರುವಂತಾಗಿದೆ.

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

1 hour ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

1 hour ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

1 hour ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

2 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

2 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

2 hours ago