ಜಿಲ್ಲೆಗಳು

ಆಸ್ಪತ್ರೆಗೆ ನುಗ್ಗಿ ಬ್ಯಾಗ್ ಕಳವು ಮಾಡಿದ್ದ ಆರೋಪಿ ಬಂಧನ

ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ ನಿವಾಸಿ ಎಂ.ಕೆ. ಹರೀಶ್ ಕುಮಾರ ಎಂಬವರ ಪುತ್ರ ಟಿಂಬರ್ ಕೆಲಸ ಮಾಡಿಕೊಂಡಿರುವ ಎಂ.ಹೆಚ್. ಶಿವಕುಮಾರ್ ಬಂಧಿತ ಆರೋಪಿ.
ನ.೨೭ ರಂದು ಸಂಜೆ ಆಸತ್ರೆಯ ಸಿಬ್ಬಂದಿಯಂತೆ ಒಳನುಗ್ಗಿದ್ದ ಚೋರನೊಬ್ಬ ಆಸ್ಪತ್ರೆಯಿಡೀ ಸುಳಿದಾಡಿ ಕರ್ತವ್ಯನಿರತ ವೈದ್ಯರ ಕೊಠಡಿಯೊಳಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳು, ಇರಿಸಿದ್ದ ಬ್ಯಾಗ್‌ಗಳನ್ನು ಜಾಲಾಡಿ ಅದರೊಳಗಡೆ ಇದ್ದ ಹಣವನ್ನು ದೋಚಿದ್ದ. ಜೊತೆಗೆ ಒಂದು ಬ್ಯಾಗ್‌ನೊಳಗಡೆ ದೊರೆತ ದ್ವಿಚಕ್ರ ವಾಹನದ ಕೀಯನ್ನು ಕಸಿದು ಆಸ್ಪತ್ರೆಯ ಹೊರಾವರಣದಲ್ಲಿ ನಿಲ್ಲಿಸಿದ್ದ ವಾಹನವನ್ನು ಕದ್ದೊಯ್ದು ಪರಾರಿಯಾಗಿದ್ದನು.
ಈ ಸಂಬಂಧ ಮೈಸೂರಿನ ವೈದ್ಯ ವಿದ್ಯಾರ್ಥಿನಿ ತರಿಕೆರೆಯ ಸೃಷ್ಟಿ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಳ್ಳನ ಸೆರೆಗೆ ಬಲೆ ಬೀಸಿದ್ದರು. ಈ ಬಗ್ಗೆ ತನಿಖೆ ಮುಂದುವರಿಸಿದ ಠಾಣಾಧಿಕಾರಿ ಶ್ರೀನಿವಾಸ್ ನೇತೃತ್ವದ ಪೊಲೀಸರ ತಂಡ ಕಳ್ಳನ ಜಾಡು ಹಿಡಿದು ವಿರಾಜಪೇಟೆಯಲ್ಲಿ ಸೆರೆ ಹಿಡಿಯುವಲ್ಲಿಯಶಸ್ವಿಯಾಗಿದ್ದಾರೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಕಳವು ಮಾಡಿದ್ದ ವಾಹನಕ್ಕೆ ಪೂಜೆ ಮಾಡಿಸಿದ್ದ ಆರೋಪಿ, ಹೂವು ಹಾಗೂ ರಿಬ್ಬನ್ ಅಂಟಿಸಿ ಸಿಂಗಾರ ಮಾಡಿ ತಾನೇ ಖರೀದಿಸಿದ ವಾಹನವೆಂದು ಜನರೆದುರು ಹೇಳಿಕೊಂಡು ಓಡಾಡುತ್ತಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದಾಗಿ ೧೫ ದಿನಗಳ ಒಳಗಡೆ ಆರೋಪಿ ಸೆರೆಮನೆ ಸೇರುವಂತಾಗಿದೆ.

andolanait

Recent Posts

ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಅರಣ್ಯ ರಕ್ಷಕ ಸಾವು

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…

4 mins ago

ಓದುಗರ ಪತ್ರ | ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…

39 mins ago

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

49 mins ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

55 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

1 hour ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

2 hours ago