ಜಿಲ್ಲೆಗಳು

ಆಸ್ಪತ್ರೆಗೆ ನುಗ್ಗಿ ಬ್ಯಾಗ್ ಕಳವು ಮಾಡಿದ್ದ ಆರೋಪಿ ಬಂಧನ

ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ ನಿವಾಸಿ ಎಂ.ಕೆ. ಹರೀಶ್ ಕುಮಾರ ಎಂಬವರ ಪುತ್ರ ಟಿಂಬರ್ ಕೆಲಸ ಮಾಡಿಕೊಂಡಿರುವ ಎಂ.ಹೆಚ್. ಶಿವಕುಮಾರ್ ಬಂಧಿತ ಆರೋಪಿ.
ನ.೨೭ ರಂದು ಸಂಜೆ ಆಸತ್ರೆಯ ಸಿಬ್ಬಂದಿಯಂತೆ ಒಳನುಗ್ಗಿದ್ದ ಚೋರನೊಬ್ಬ ಆಸ್ಪತ್ರೆಯಿಡೀ ಸುಳಿದಾಡಿ ಕರ್ತವ್ಯನಿರತ ವೈದ್ಯರ ಕೊಠಡಿಯೊಳಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳು, ಇರಿಸಿದ್ದ ಬ್ಯಾಗ್‌ಗಳನ್ನು ಜಾಲಾಡಿ ಅದರೊಳಗಡೆ ಇದ್ದ ಹಣವನ್ನು ದೋಚಿದ್ದ. ಜೊತೆಗೆ ಒಂದು ಬ್ಯಾಗ್‌ನೊಳಗಡೆ ದೊರೆತ ದ್ವಿಚಕ್ರ ವಾಹನದ ಕೀಯನ್ನು ಕಸಿದು ಆಸ್ಪತ್ರೆಯ ಹೊರಾವರಣದಲ್ಲಿ ನಿಲ್ಲಿಸಿದ್ದ ವಾಹನವನ್ನು ಕದ್ದೊಯ್ದು ಪರಾರಿಯಾಗಿದ್ದನು.
ಈ ಸಂಬಂಧ ಮೈಸೂರಿನ ವೈದ್ಯ ವಿದ್ಯಾರ್ಥಿನಿ ತರಿಕೆರೆಯ ಸೃಷ್ಟಿ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಳ್ಳನ ಸೆರೆಗೆ ಬಲೆ ಬೀಸಿದ್ದರು. ಈ ಬಗ್ಗೆ ತನಿಖೆ ಮುಂದುವರಿಸಿದ ಠಾಣಾಧಿಕಾರಿ ಶ್ರೀನಿವಾಸ್ ನೇತೃತ್ವದ ಪೊಲೀಸರ ತಂಡ ಕಳ್ಳನ ಜಾಡು ಹಿಡಿದು ವಿರಾಜಪೇಟೆಯಲ್ಲಿ ಸೆರೆ ಹಿಡಿಯುವಲ್ಲಿಯಶಸ್ವಿಯಾಗಿದ್ದಾರೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಕಳವು ಮಾಡಿದ್ದ ವಾಹನಕ್ಕೆ ಪೂಜೆ ಮಾಡಿಸಿದ್ದ ಆರೋಪಿ, ಹೂವು ಹಾಗೂ ರಿಬ್ಬನ್ ಅಂಟಿಸಿ ಸಿಂಗಾರ ಮಾಡಿ ತಾನೇ ಖರೀದಿಸಿದ ವಾಹನವೆಂದು ಜನರೆದುರು ಹೇಳಿಕೊಂಡು ಓಡಾಡುತ್ತಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದಾಗಿ ೧೫ ದಿನಗಳ ಒಳಗಡೆ ಆರೋಪಿ ಸೆರೆಮನೆ ಸೇರುವಂತಾಗಿದೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago