ಜಿಲ್ಲೆಗಳು

ಆಸ್ಪತ್ರೆಗೆ ನುಗ್ಗಿ ಬ್ಯಾಗ್ ಕಳವು ಮಾಡಿದ್ದ ಆರೋಪಿ ಬಂಧನ

ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ ನಿವಾಸಿ ಎಂ.ಕೆ. ಹರೀಶ್ ಕುಮಾರ ಎಂಬವರ ಪುತ್ರ ಟಿಂಬರ್ ಕೆಲಸ ಮಾಡಿಕೊಂಡಿರುವ ಎಂ.ಹೆಚ್. ಶಿವಕುಮಾರ್ ಬಂಧಿತ ಆರೋಪಿ.
ನ.೨೭ ರಂದು ಸಂಜೆ ಆಸತ್ರೆಯ ಸಿಬ್ಬಂದಿಯಂತೆ ಒಳನುಗ್ಗಿದ್ದ ಚೋರನೊಬ್ಬ ಆಸ್ಪತ್ರೆಯಿಡೀ ಸುಳಿದಾಡಿ ಕರ್ತವ್ಯನಿರತ ವೈದ್ಯರ ಕೊಠಡಿಯೊಳಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳು, ಇರಿಸಿದ್ದ ಬ್ಯಾಗ್‌ಗಳನ್ನು ಜಾಲಾಡಿ ಅದರೊಳಗಡೆ ಇದ್ದ ಹಣವನ್ನು ದೋಚಿದ್ದ. ಜೊತೆಗೆ ಒಂದು ಬ್ಯಾಗ್‌ನೊಳಗಡೆ ದೊರೆತ ದ್ವಿಚಕ್ರ ವಾಹನದ ಕೀಯನ್ನು ಕಸಿದು ಆಸ್ಪತ್ರೆಯ ಹೊರಾವರಣದಲ್ಲಿ ನಿಲ್ಲಿಸಿದ್ದ ವಾಹನವನ್ನು ಕದ್ದೊಯ್ದು ಪರಾರಿಯಾಗಿದ್ದನು.
ಈ ಸಂಬಂಧ ಮೈಸೂರಿನ ವೈದ್ಯ ವಿದ್ಯಾರ್ಥಿನಿ ತರಿಕೆರೆಯ ಸೃಷ್ಟಿ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಕಳ್ಳನ ಸೆರೆಗೆ ಬಲೆ ಬೀಸಿದ್ದರು. ಈ ಬಗ್ಗೆ ತನಿಖೆ ಮುಂದುವರಿಸಿದ ಠಾಣಾಧಿಕಾರಿ ಶ್ರೀನಿವಾಸ್ ನೇತೃತ್ವದ ಪೊಲೀಸರ ತಂಡ ಕಳ್ಳನ ಜಾಡು ಹಿಡಿದು ವಿರಾಜಪೇಟೆಯಲ್ಲಿ ಸೆರೆ ಹಿಡಿಯುವಲ್ಲಿಯಶಸ್ವಿಯಾಗಿದ್ದಾರೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಕಳವು ಮಾಡಿದ್ದ ವಾಹನಕ್ಕೆ ಪೂಜೆ ಮಾಡಿಸಿದ್ದ ಆರೋಪಿ, ಹೂವು ಹಾಗೂ ರಿಬ್ಬನ್ ಅಂಟಿಸಿ ಸಿಂಗಾರ ಮಾಡಿ ತಾನೇ ಖರೀದಿಸಿದ ವಾಹನವೆಂದು ಜನರೆದುರು ಹೇಳಿಕೊಂಡು ಓಡಾಡುತ್ತಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದಾಗಿ ೧೫ ದಿನಗಳ ಒಳಗಡೆ ಆರೋಪಿ ಸೆರೆಮನೆ ಸೇರುವಂತಾಗಿದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

3 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

3 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

3 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago