ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ (ನಿವೃತ್ತ) ಕೊಡಂದೇರ ಕಾರ್ಯಪ್ಪ ಮಾತನಾಡಿ, ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಕೊಡವರು ಎನ್ನುವುದಕ್ಕಿಂತ ಮೊದಲು ಅವರು ಭಾರತೀಯರಾಗಿದ್ದಾರೆ. ದೇಶ ಸೇವೆ ಮೂಲಕ ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಿವೃತ್ತ ಯೋಧರಿಗೆ ಹಾಗೂ ಮೃತಪಟ್ಟ ಯೋಧರ ಪತ್ನಿಯರಿಗೆ ಸರ್ಕಾರದಿಂದ ಸಹಕಾರ ನೀಡುವಂತಾಗಬೇಕು ಎಂದರು.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಿ ಗೌರವ ನಮನ ಸಲ್ಲಿಸಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ, ಕೊಡಗು ವೀರಶೂರರ ನಾಡು ಎಂದು ಕೀರ್ತಿ ಪಡೆದಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರಿಂದ ಕೊಡಗಿನ ಹೆಸರು ಪ್ರಪಂಚದಲ್ಲೇ ಗುರುತಿಸಿಕೊಳ್ಳುವಂತಾಗಿದೆ. ವೀರ ಸೇನಾನಿಗಳ ಆದರ್ಶವನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಚೀರ ಎ.ಅಯ್ಯಪ್ಪ, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಶಾಖೆಯ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ಮಾತನಾಡಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್ ಹಾಗೂ ಆಡಳಿತ ಮಂಡಳಿ ಸದಸ್ಯರು, ಅಜ್ಜಮಾಡ ಕುಟುಂಬದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಅಜ್ಜಮಾಡ ಜಿ.ಬೋಪಯ್ಯ ಇತರರು ಪುಷ್ಪನಮನ ಸಲ್ಲಿಸಿದರು.
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…