ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ (ನಿವೃತ್ತ) ಕೊಡಂದೇರ ಕಾರ್ಯಪ್ಪ ಮಾತನಾಡಿ, ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಕೊಡವರು ಎನ್ನುವುದಕ್ಕಿಂತ ಮೊದಲು ಅವರು ಭಾರತೀಯರಾಗಿದ್ದಾರೆ. ದೇಶ ಸೇವೆ ಮೂಲಕ ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಿವೃತ್ತ ಯೋಧರಿಗೆ ಹಾಗೂ ಮೃತಪಟ್ಟ ಯೋಧರ ಪತ್ನಿಯರಿಗೆ ಸರ್ಕಾರದಿಂದ ಸಹಕಾರ ನೀಡುವಂತಾಗಬೇಕು ಎಂದರು.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಿ ಗೌರವ ನಮನ ಸಲ್ಲಿಸಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ, ಕೊಡಗು ವೀರಶೂರರ ನಾಡು ಎಂದು ಕೀರ್ತಿ ಪಡೆದಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರಿಂದ ಕೊಡಗಿನ ಹೆಸರು ಪ್ರಪಂಚದಲ್ಲೇ ಗುರುತಿಸಿಕೊಳ್ಳುವಂತಾಗಿದೆ. ವೀರ ಸೇನಾನಿಗಳ ಆದರ್ಶವನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಚೀರ ಎ.ಅಯ್ಯಪ್ಪ, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಶಾಖೆಯ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ಮಾತನಾಡಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್ ಹಾಗೂ ಆಡಳಿತ ಮಂಡಳಿ ಸದಸ್ಯರು, ಅಜ್ಜಮಾಡ ಕುಟುಂಬದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಅಜ್ಜಮಾಡ ಜಿ.ಬೋಪಯ್ಯ ಇತರರು ಪುಷ್ಪನಮನ ಸಲ್ಲಿಸಿದರು.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…