ಜಿಲ್ಲೆಗಳು

ನಾಳೆ ಮಡಿಕೇರಿ ತಾಲ್ಲೂಕು ಕಸಾಪ ಸಮ್ಮೇಳನ

ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಬೆಟ್ಟಗೇರಿ ಗ್ರಾಪಂ ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ನೆರವೇರಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ್ ಕಾಮತ್ ನೆರವೇರಿಸಿದರೆ, ಕನ್ನಡ ಧ್ವಜಾರೋಹಣವನ್ನು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ನೆರವೇರಿಸುವರು.
8.30 ಗಂಟೆಗೆ ಗಣ್ಯರ ನೆನಪಿನ ದ್ವಾರಗಳ ಉದ್ಘಾಟನೆ ನಡೆಯಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ ವ್ಯವಸ್ಥಾಪಕ ತೋರೆರ ಎಂ.ಮುದ್ದಯ್ಯ, ಕೆ.ಸಿ.ರಾಮಮೂರ್ತಿ ಮತ್ತು ಚೌರೀರ ಎಂ.ಪೆಮ್ಮಯ್ಯ ನೆನಪಿನ ದ್ವಾರವನ್ನು ಸಾಹಿತಿ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಸ್ವಾತಂತ್ರ್ತ್ಯ ಹೋರಾಟಗಾರರ ಹುತಾತ್ಮ ಸುಬೇದಾರ್ ಗುಡ್ಡಮನೆ ಅಪ್ಪಯ್ಯಗೌಡ ನೆನಪಿನ ದ್ವಾರವನ್ನು ಉದಯ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಉದ್ಘಾಟಿಸುವರು ಎಂದು ತಿಳಿಸಿದರು.
ಬೆಳಿಗ್ಗೆ 9.15ಕ್ಕೆ ಬೆಟ್ಟಗೇರಿ- ನಾಪೋಕ್ಲು ಕೂಡುರಸ್ತೆಯಿಂದ ಸಮ್ಮೇಳನಾಧ್ಯಕ್ಷರಾದ ತಂಬಂಡ ಡಾ.ವಿಜಯ್‌ ಪೂಣಚ್ಚರನ್ನು ಮೆರವಣಿಗೆ ಮೂಲಕ ಕರೆತರಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 10.30 ಗಂಟೆಗೆ ಸಮ್ಮೇಳನಾಧ್ಯಕ್ಷ ಡಾ.ವಿಜಯ್‌ ಪೂಣಚ್ಚರ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದ  ಉದ್ಘಾಟನೆಯನ್ನು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯರವರು ನೆರವೇರಿಸುವರು. ಮಡಿಕೇರಿ ಶಾಸಕರ ಎಂ.ಪಿ.ಅಪ್ಪಚ್ಚು ರಂಜನ್, ಎಂಎಲ್‌ಸಿ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭ: ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ವಹಿಸುವರು. ಸಾಹಿತಿ ಕೆ.ಆರ್.ಗಂಗಾಧರ ಗೌಡ, ಕಸಾಪ ಅಧ್ಯಕ್ಷ ಎಂ.ಪಿ.ಕೇಶವ್ ಕಾಮತ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹಮದ್, ರೇವರಿ ರಮೇಶ್, ಕೆ.ಯು.ರಂಜಿತ್, ಕಡ್ಲೇರ ತುಳಸಿ ಮೋಹನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago