ಜಿಲ್ಲೆಗಳು

ಮಡಿಕೇರಿ : ಫೆ.25 ರಂದು ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ

ಮಡಿಕೇರಿ: ಮೈಸೂರಿನ ರಂಗಾಯಣದ ವತಿಯಿಂದ ಫೆ.25ರಂದು ಶನಿವಾರ ಸಂಜೆ 6 ಗಂಟೆಗೆ ಕುಶಾಲನಗರದಲ್ಲಿ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶಿಸಲಾಗುವುದು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.
ಕುಶಾಲನಗರದ ನೂತನ ಕಲಾಮಂದಿರದಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಈ ನಾಟಕ ರಚಿಸಿ ನಿರ್ದೇಶಿಸಿದ್ದಾರೆ. ಹೆಸರಾಂತ ಕಲಾವಿದ ಶಶಿಧರ ಅಡಪ ರಂಗವಿನ್ಯಾಸ ಮಾಡಿದ್ದು, ಪ್ರಮೋದ್ ಶಿಗ್ಗಾಂವ್ ವಸ್ತ್ರ ವಿನ್ಯಾಸ, ಆರ್.ಸಿ.ಧನಂಜಯ, ಸುಬ್ರಹ್ಮಣ್ಯ ಸಂಗೀತವಿದೆ. 38 ಕಲಾವಿದರು ನಟಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯವ್ಯಾಪಿ ‘ಟಿಪ್ಪು ನಿಜ ಕನಸುಗಳು’ ನಾಟಕ ಅತ್ಯಂತ ಯಶಸ್ವಿಯಾಗಿದ್ದು, ನಾಟಕ ಪುಸ್ತಕ ಈಗಾಗಲೇ 25 ಸಾವಿರಕ್ಕೂ ಅಧಿಕ ಪ್ರತಿಗಳು ಮಾರಾಟವಾಗಿವೆ. 80  ಸಾವಿರ ಜನರಿಗೆ ಈ ಸಾಹಿತ್ಯ ತಲುಪಿದೆ. ಕುಶಾಲನಗರದಲ್ಲಿ ಶನಿವಾರ ‘ಟಿಪ್ಪು ನಿಜ ಕನಸುಗಳು’ ನಾಟಕದ 38ನೇ ಪ್ರದರ್ಶನ ಆಯೋಜಿತವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಟಿಕೆಟ್‌ಗಾಗಿ ಮೊ.ಸಂ. 94830 94830 ಅನ್ನು ಸಂಪರ್ಕಿಸಬಹುದಾಗಿದೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago