ಜಿಲ್ಲೆಗಳು

ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್

ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣಾ ಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಬಹುದ್ದೂರ್ ಇನ್ಸ್ಟಿಟ್ಯೂಟ್ ಆಫ್ ವ್ಯಾನೇಜ್‌ಮೆಂಟ್ ಸೈನ್ಸ್ ಯೂನಿವರ್ಸಿಟಿ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ. ಆಯಿಷಾ ಎಂ. ಶರೀಫ್ ಮಾತನಾಡಿ, ಇಂದಿನ ಮತ್ತು ನಾಳಿನ ವ್ಯವಹಾರದಲ್ಲಿ ಜ್ಞಾನವು ಪ್ರಮುಖ ಪಾತ್ರವಹಿಸಲಿದೆ. ಸಂಸ್ಥೆಯನ್ನು ಪುನಾರಚಿಸುವ ಮತ್ತು ಮಾನವ ಸಂಪನ್ಮೂಲಗಳ ಪುನರ್ ನಿಯೋಜನೆ  ಜ್ಞಾನವು ಇತರೆ ಸಂಸ್ಥೆಗಳಿಗಿಂತ ಸ್ಪರ್ಧಾತ್ಮಕ ಅಂಚನ್ನು ಪಡೆಯಲು ಪ್ರಮುಖವಾಗಿದೆ ಎಂದು ಹೇಳಿದರು.
ಹೊಸ ಜನರ ಆರ್ಥಿಕತೆ, ಸಂಘಟನೆ ಮತ್ತು ನಿರ್ವಹಣೆುಂ ಕಲ್ಪನೆಯನ್ನು ವಿವರಿಸಿದ ಅವರು ಕಾರ್ಪೊರೇಟ್ ಜ್ಞಾನದ ಮಹತ್ವವನ್ನು ಅರಿತುಕೊಳ್ಳಲು ಪ್ರಾರಂಭಿಸಿದೆ. ಇಂದಿನ ವೃತ್ತಿಪರರು ಹೆಚ್ಚು ಬೇಡಿಕೆಯಲ್ಲಿದ್ದಾರೆ, ಜನರು ಸಂಸ್ಥೆಯ ಪ್ರಮುಖ ಸಾಧನವಾಗಿದ್ದಾರೆ ಮತ್ತು ಆದ್ದರಿಂದ ಗ್ರಾಹಕರ ಅಗತ್ಯತೆಗಳ ಜ್ಞಾನ, ಉತ್ಪಾದನೆ ಮತ್ತು ಜನರ ನಡುವಿನ ಸಂಬಂಧ, ವ್ಯವಹಾರ ಪ್ರಕ್ರಿಯೆ ಮರು-ಎಂಜಿನಿಯರಿಂಗ್ ಬಹಳ ಅವಶ್ಯಕ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜುಂಕುಮಾರಿ, ವ್ಯವಹಾರ ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಎಸ್.ಶೈಲಾ, ಸಂಯೋಜಕ ಎನ್.ಸುನಿಲ್ ಸ್ವಾಗತಿಸಿದರು. ವೆಬಿನಾರ್‌ನಲ್ಲಿ ಭಾರತದ್ಯಾಂತ ಸುಮಾರು ೩೦೦ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

51 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

55 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago