ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್ನ ಕಾರ್ಯದರ್ಶಿ ಎನ್.ಗೋವಿಂದ, ಬೆಳಗ್ಗೆ ನಡೆಯಲಿರುವ ಮಹಾಭಿಷೇಕದಲ್ಲಿ 32 ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಆದಿಚುಂಚನಗಿರಿ ಮಠದ ಸೋಮನಾಥ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ, ಕರ್ನಾಟಕದ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಎಸ್..ಬನ್ನೂರಮಠ ಬಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಬಾರಿ ಸುಮಾರು 5ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಬರುವ ಭಕ್ತರಿಗೂ ಪ್ರಸಾದ ವ್ಯವಸ್ತೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಸುಮಾರು 2.5ಲಕ್ಷ ಕರ್ಚಾಗಲಿದ್ದು, ಟ್ರಸ್ಟ್ನೊಂದಿಗೆ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಲು ಮುಂದಾಗಿರುವುದಾಗಿ ತಿಳಿಸಿದರು.
ಟ್ರಸ್ಟ್ ಅಧ್ಯಕ್ಷ ಪ್ರಕಾಶನ್, ಖಜಾಂಜಿ ಪ್ರಕಾಶ್, ಖಜಾಂಜಿ ಸುಂದರ್, ಅಭಿಷೇಕ ನಿರ್ವಹಣಾಧಿಕಾರಿ ಶಿವಕುಮಾರ್ ಇದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…