ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಸಮ್ಮುಖದಲ್ಲಿ ವರ್ಷಂಪ್ರತಿಯಂತೆ ಅಭಿಷೇಕ ನೆರವೇರಿಸಲಾಯಿತು. ನೂರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು.
ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಕಾರ್ತಿಕ ಮಾಸದ ಸಂದರ್ಭದಲ್ಲಿ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸುತ್ತಾ ಬಂದಿದೆ. ಈ ವರ್ಷವೂ ಹಾಲು, ಮೊಸರು, ತುಪ್ಪ, ಜೇನು ತುಪ್ಪ, ಸಕ್ಕರೆ, ಅರಿಶಿನ, ಕುಂಕುಮ, ಸಿಂಧೂರ, ರಕ್ತಚಂದನ, ಭಷ್ಮ, ಗಂಧ, ಬಾಳೆಹಣ್ಣು, ದ್ರಾಕ್ಷಿ, ಬೆಲ್ಲ, ಖರ್ಚೂರ, ಸೌತೆಕಾಯಿ, ಕಬ್ಬಿನ ರಸ, ಎಳನೀರು, ನಿಂಬೆಹಣ್ಣು ರಸ, ತೈಲ, ಪಾಯಸ, ಗೋದಿಹಿಟ್ಟು, ಕಡ್ಲೆ ಇಟ್ಟು, ಹೆಸರಿಟ್ಟು, ದರ್ಬೆ, ಪುಷ್ಪ ಸೇರಿದಂತೆ ನಾನಾ ಬಗೆಯ ದ್ರವ್ಯಗಳಿಂದ ಅಭಿಷೇಕಗಳನ್ನು ನೆರವೇರಿಸಲಾಯಿತು.
ಅಭಿಷೇಕದ ಬಳಿಕ ಅಷ್ಟೋತ್ತರ, ಮಹಾಮಂಗಳಾರತಿ, ಸುಗಂಧ ದ್ರವ್ಯ ಸಿಂಪಡಣೆ ನೆರವೇರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಎನ್.ಗೋವಿಂದ, ಸುಂದರ್ ಮತ್ತಿತರರು ಕಾರ್ಯಕ್ರಮದ ಮುಂದಾಳತ್ವ ವಹಿಸಿದದ್ದರು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…