ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಸಮ್ಮುಖದಲ್ಲಿ ವರ್ಷಂಪ್ರತಿಯಂತೆ ಅಭಿಷೇಕ ನೆರವೇರಿಸಲಾಯಿತು. ನೂರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು.
ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಕಾರ್ತಿಕ ಮಾಸದ ಸಂದರ್ಭದಲ್ಲಿ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸುತ್ತಾ ಬಂದಿದೆ. ಈ ವರ್ಷವೂ ಹಾಲು, ಮೊಸರು, ತುಪ್ಪ, ಜೇನು ತುಪ್ಪ, ಸಕ್ಕರೆ, ಅರಿಶಿನ, ಕುಂಕುಮ, ಸಿಂಧೂರ, ರಕ್ತಚಂದನ, ಭಷ್ಮ, ಗಂಧ, ಬಾಳೆಹಣ್ಣು, ದ್ರಾಕ್ಷಿ, ಬೆಲ್ಲ, ಖರ್ಚೂರ, ಸೌತೆಕಾಯಿ, ಕಬ್ಬಿನ ರಸ, ಎಳನೀರು, ನಿಂಬೆಹಣ್ಣು ರಸ, ತೈಲ, ಪಾಯಸ, ಗೋದಿಹಿಟ್ಟು, ಕಡ್ಲೆ ಇಟ್ಟು, ಹೆಸರಿಟ್ಟು, ದರ್ಬೆ, ಪುಷ್ಪ ಸೇರಿದಂತೆ ನಾನಾ ಬಗೆಯ ದ್ರವ್ಯಗಳಿಂದ ಅಭಿಷೇಕಗಳನ್ನು ನೆರವೇರಿಸಲಾಯಿತು.
ಅಭಿಷೇಕದ ಬಳಿಕ ಅಷ್ಟೋತ್ತರ, ಮಹಾಮಂಗಳಾರತಿ, ಸುಗಂಧ ದ್ರವ್ಯ ಸಿಂಪಡಣೆ ನೆರವೇರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಎನ್.ಗೋವಿಂದ, ಸುಂದರ್ ಮತ್ತಿತರರು ಕಾರ್ಯಕ್ರಮದ ಮುಂದಾಳತ್ವ ವಹಿಸಿದದ್ದರು.
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…