ಜಿಲ್ಲೆಗಳು

ಮೈಸೂರು ನಂದಿಗೆ ಕಾರ್ತಿಕದ ಮಹಾಭಿಷೇಕ

ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಸಮ್ಮುಖದಲ್ಲಿ ವರ್ಷಂಪ್ರತಿಯಂತೆ ಅಭಿಷೇಕ ನೆರವೇರಿಸಲಾಯಿತು. ನೂರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು.

ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಕಾರ್ತಿಕ ಮಾಸದ ಸಂದರ್ಭದಲ್ಲಿ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸುತ್ತಾ ಬಂದಿದೆ. ಈ ವರ್ಷವೂ ಹಾಲು, ಮೊಸರು, ತುಪ್ಪ, ಜೇನು ತುಪ್ಪ, ಸಕ್ಕರೆ, ಅರಿಶಿನ, ಕುಂಕುಮ, ಸಿಂಧೂರ, ರಕ್ತಚಂದನ, ಭಷ್ಮ, ಗಂಧ, ಬಾಳೆಹಣ್ಣು, ದ್ರಾಕ್ಷಿ, ಬೆಲ್ಲ, ಖರ್ಚೂರ, ಸೌತೆಕಾಯಿ, ಕಬ್ಬಿನ ರಸ, ಎಳನೀರು, ನಿಂಬೆಹಣ್ಣು ರಸ, ತೈಲ, ಪಾಯಸ, ಗೋದಿಹಿಟ್ಟು, ಕಡ್ಲೆ ಇಟ್ಟು, ಹೆಸರಿಟ್ಟು, ದರ್ಬೆ, ಪುಷ್ಪ ಸೇರಿದಂತೆ ನಾನಾ ಬಗೆಯ ದ್ರವ್ಯಗಳಿಂದ ಅಭಿಷೇಕಗಳನ್ನು ನೆರವೇರಿಸಲಾಯಿತು.

ಅಭಿಷೇಕದ ಬಳಿಕ ಅಷ್ಟೋತ್ತರ, ಮಹಾಮಂಗಳಾರತಿ, ಸುಗಂಧ ದ್ರವ್ಯ ಸಿಂಪಡಣೆ ನೆರವೇರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಎನ್.ಗೋವಿಂದ, ಸುಂದರ್ ಮತ್ತಿತರರು ಕಾರ್ಯಕ್ರಮದ ಮುಂದಾಳತ್ವ ವಹಿಸಿದದ್ದರು.

 

andolana

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago