ಜಿಲ್ಲೆಗಳು

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.

*ಧೈರ್ಯ ಮಾಡಲಿಲ್ಲ*

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.

*ಗೊಂದಲ ಇಲ್ಲ*
ಎಸ್.ಸಿ/ ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.

 

andolanait

Recent Posts

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

43 mins ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

55 mins ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

3 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

3 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

4 hours ago