ಜಿಲ್ಲೆಗಳು

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.

*ಧೈರ್ಯ ಮಾಡಲಿಲ್ಲ*

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.

*ಗೊಂದಲ ಇಲ್ಲ*
ಎಸ್.ಸಿ/ ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.

 

andolanait

Recent Posts

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

15 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

22 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

36 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

12 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago