ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.
*ಧೈರ್ಯ ಮಾಡಲಿಲ್ಲ*
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.
*ಗೊಂದಲ ಇಲ್ಲ*
ಎಸ್.ಸಿ/ ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…