ಜಿಲ್ಲೆಗಳು

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.

*ಧೈರ್ಯ ಮಾಡಲಿಲ್ಲ*

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.

*ಗೊಂದಲ ಇಲ್ಲ*
ಎಸ್.ಸಿ/ ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.

 

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago