ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ನಗರದ ಹೆಸರಾಂತ ದೇವಸ್ಥಾನವಾದ ಚಾಮುಂಡೇಶ್ವರಿ ಬೆಟ್ಟದಿದಂ ತಮ್ಮ ಪ್ರಯಾಣವನ್ನು ಇಂದು ಆರಂಭಿಸಿದ್ದಾರೆ. ದೇವರ ಆಶೀರ್ವಾದದೊಂದಿಗೆ ನಮ್ಮ ಪ್ರಯಾಣವನ್ನು ಪ್ರಾರಂಭಿಸುವುದು ಯೋಧರ ಸಂಪ್ರದಾಯವಾಗಿದೆ. ಈ ವರ್ಷ ಮಹಾರಾಜ ಟ್ರೋಫಿಗೆ ಸ್ಪರ್ಧಿಸುವ ಎಲ್ಲಾ ಆಟಗಾರರ ಉತ್ತಮ ಆರೋಗ್ಯಕ್ಕಾಗಿ ಮತ್ತು ಉತ್ತಮ ಕ್ರಿಕೆಟ್ಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅರುಣ್ ರಂಗ ಅವರು ತಿಳಿಸಿದರು.
ಮೈಸೂರು ವಲಯದಿಂದ ಆಯ್ಕೆಗೊಂಡಿರು ಸ್ಪರ್ಧಿಗಳು
ಜೆ ಸುಚಿತ್ – ಬೆಂಗಳೂರು
ಚೇತನ್ ಎಲ್ ಆರ್ – ಬೆಂಗಳೂರು
ಕುಮಾರ್ ಎಲ್ ಆರ್ – ಬೆಂಗಳೂರು
ಕೃತಿಕ್ ಕೃಷ್ಣ – ಗುಲ್ಬರ್ಗ
ನವೀನ್ ಎಂಜಿ – ಹುಬ್ಬಳ್ಳಿ
ಗೌತಮ್ ಸಾಗರ್ – ಹುಬ್ಬಳ್ಳಿ
ಎಂ ವೆಂಕಟೇಶ್ – ಮಂಗಳೂರು
ನಿಕಿನ್ ಜೋಶಿ – ಮಂಗಳೂರು
ದರ್ಶನ್ ಎಂ ಬಿ – ಶಿವಮೊಗ್ಗ
ಉತ್ತಮ್ ಅಯ್ಯಪ್ಪ – ಶಿವಮೊಗ್ಗ
ಇವರುಗಳು ಇಂದು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ಮಹಾರಾಜ ಟಿ-೨೦ ಟ್ರೋಫಿಗಾಗಿ ನಡೆಯುವ ಪಂದ್ಯದ ವಿವರ
ಪ್ರತಿ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಹಾಗೂ ಪ್ಯಾನ್ ಕೋಡ್ ಆಪ್ ನಲ್ಲಿ ಪ್ರಸಾರವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಹೊಸ ಲೀಗ್ 6 ತಂಡಗಳ ಟೂರ್ನಿಯಾಗಿದ್ದು, ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ರಾಯಚೂರು ಹಾಗೂ ಶಿವಮೊಗ್ಗ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಈ ತಂಡಗಳ ಪ್ರಾಯೋಜಕತ್ವವನ್ನು ವಿವಿಧ ಸಂಸ್ಥೆಗಳು ವಹಿಸಿಕೊಂಡಿವೆ. ಟೂರ್ನಿಯ ಪಂದ್ಯಗಳಿಗೆ ಮೈಸೂರು ಹಾಗೂ ಬೆಂಗಳೂರು ಆತಿಥ್ಯ ವಹಿಸಲಿವೆ. ಆರಂಭಿಕ 18 ಪಂದ್ಯಗಳು ಮೈಸೂರಿನಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ 16 ಪಂದ್ಯಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಆಟಗಾರರನ್ನು ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪುಗಳಾಗಿ ವಿಂಗಡಿಸಲಾಗಿದ್ದು, ‘ಎ’ ಗುಂಪಿನ ಆಟಗಾರರು ತಲಾ 5 ಲಕ್ಷ ರೂಪಾಯಿ ಪಡೆಯಲಿದ್ದಾರೆ. ‘ಬಿ’ ಗುಂಪಿಗೆ 2 ಲಕ್ಷ, ‘ಸಿ’ ಗುಂಪಿಗೆ 1 ಲಕ್ಷ ಹಾಗೂ ‘ಡಿ’ ಗುಂಪಿಗೆ 50,000 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…