ಜಿಲ್ಲೆಗಳು

ಪ್ರಯಾಣ ಆರಂಭಿಸಿದ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯ ಸ್ಪರ್ಧಿಗಳು

ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.

ಪ್ರಯಾಣ ಆರಂಭಿಸಿರುವ ಸ್ಪರ್ಧಿಗಳು

ನಗರದ ಹೆಸರಾಂತ ದೇವಸ್ಥಾನವಾದ ಚಾಮುಂಡೇಶ್ವರಿ ಬೆಟ್ಟದಿದಂ ತಮ್ಮ ಪ್ರಯಾಣವನ್ನು ಇಂದು ಆರಂಭಿಸಿದ್ದಾರೆ. ದೇವರ ಆಶೀರ್ವಾದದೊಂದಿಗೆ ನಮ್ಮ ಪ್ರಯಾಣವನ್ನು ಪ್ರಾರಂಭಿಸುವುದು ಯೋಧರ ಸಂಪ್ರದಾಯವಾಗಿದೆ. ಈ ವರ್ಷ ಮಹಾರಾಜ ಟ್ರೋಫಿಗೆ ಸ್ಪರ್ಧಿಸುವ ಎಲ್ಲಾ ಆಟಗಾರರ ಉತ್ತಮ ಆರೋಗ್ಯಕ್ಕಾಗಿ ಮತ್ತು ಉತ್ತಮ ಕ್ರಿಕೆಟ್‌ಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅರುಣ್‌ ರಂಗ ಅವರು ತಿಳಿಸಿದರು.

ಪಂದ್ಯದ ಟ್ರೋಫಿ

ಮೈಸೂರು ವಲಯದಿಂದ ಆಯ್ಕೆಗೊಂಡಿರು ಸ್ಪರ್ಧಿಗಳು

ಜೆ ಸುಚಿತ್  – ಬೆಂಗಳೂರು

ಚೇತನ್ ಎಲ್ ಆರ್  – ಬೆಂಗಳೂರು

ಕುಮಾರ್ ಎಲ್ ಆರ್ – ಬೆಂಗಳೂರು

ಕೃತಿಕ್ ಕೃಷ್ಣ – ಗುಲ್ಬರ್ಗ

ನವೀನ್ ಎಂಜಿ – ಹುಬ್ಬಳ್ಳಿ

ಗೌತಮ್ ಸಾಗರ್ – ಹುಬ್ಬಳ್ಳಿ

ಎಂ ವೆಂಕಟೇಶ್ – ಮಂಗಳೂರು

ನಿಕಿನ್ ಜೋಶಿ – ಮಂಗಳೂರು

ದರ್ಶನ್ ಎಂ ಬಿ – ಶಿವಮೊಗ್ಗ

ಉತ್ತಮ್ ಅಯ್ಯಪ್ಪ – ಶಿವಮೊಗ್ಗ

ಇವರುಗಳು ಇಂದು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.

ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿ ಟ್ರೋಪಿಯ ಅನಾವರಣ

ಮಹಾರಾಜ ಟಿ-೨೦ ಟ್ರೋಫಿಗಾಗಿ ನಡೆಯುವ ಪಂದ್ಯದ ವಿವರ

ಪ್ರತಿ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಹಾಗೂ ಪ್ಯಾನ್ ಕೋಡ್ ಆಪ್ ನಲ್ಲಿ ಪ್ರಸಾರವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಈ ಹೊಸ ಲೀಗ್‌ 6 ತಂಡಗಳ ಟೂರ್ನಿಯಾಗಿದ್ದು, ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ರಾಯಚೂರು ಹಾಗೂ ಶಿವಮೊಗ್ಗ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಈ ತಂಡಗಳ ಪ್ರಾಯೋಜಕತ್ವವನ್ನು ವಿವಿಧ ಸಂಸ್ಥೆಗಳು ವಹಿಸಿಕೊಂಡಿವೆ. ಟೂರ್ನಿಯ ಪಂದ್ಯಗಳಿಗೆ ಮೈಸೂರು ಹಾಗೂ ಬೆಂಗಳೂರು ಆತಿಥ್ಯ ವಹಿಸಲಿವೆ. ಆರಂಭಿಕ 18 ಪಂದ್ಯಗಳು ಮೈಸೂರಿನಲ್ಲಿ ನಡೆಯಲಿದ್ದು, ಫೈನಲ್‌ ಸೇರಿದಂತೆ 16 ಪಂದ್ಯಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಆಟಗಾರರನ್ನು ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪುಗಳಾಗಿ ವಿಂಗಡಿಸಲಾಗಿದ್ದು, ‘ಎ’ ಗುಂಪಿನ ಆಟಗಾರರು ತಲಾ 5 ಲಕ್ಷ ರೂಪಾಯಿ ಪಡೆಯಲಿದ್ದಾರೆ. ‘ಬಿ’ ಗುಂಪಿಗೆ 2 ಲಕ್ಷ, ‘ಸಿ’ ಗುಂಪಿಗೆ 1 ಲಕ್ಷ ಹಾಗೂ ‘ಡಿ’ ಗುಂಪಿಗೆ 50,000 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

 

 

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

4 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

5 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

5 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

5 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

5 hours ago