ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ನಗರದ ಹೆಸರಾಂತ ದೇವಸ್ಥಾನವಾದ ಚಾಮುಂಡೇಶ್ವರಿ ಬೆಟ್ಟದಿದಂ ತಮ್ಮ ಪ್ರಯಾಣವನ್ನು ಇಂದು ಆರಂಭಿಸಿದ್ದಾರೆ. ದೇವರ ಆಶೀರ್ವಾದದೊಂದಿಗೆ ನಮ್ಮ ಪ್ರಯಾಣವನ್ನು ಪ್ರಾರಂಭಿಸುವುದು ಯೋಧರ ಸಂಪ್ರದಾಯವಾಗಿದೆ. ಈ ವರ್ಷ ಮಹಾರಾಜ ಟ್ರೋಫಿಗೆ ಸ್ಪರ್ಧಿಸುವ ಎಲ್ಲಾ ಆಟಗಾರರ ಉತ್ತಮ ಆರೋಗ್ಯಕ್ಕಾಗಿ ಮತ್ತು ಉತ್ತಮ ಕ್ರಿಕೆಟ್ಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅರುಣ್ ರಂಗ ಅವರು ತಿಳಿಸಿದರು.
ಮೈಸೂರು ವಲಯದಿಂದ ಆಯ್ಕೆಗೊಂಡಿರು ಸ್ಪರ್ಧಿಗಳು
ಜೆ ಸುಚಿತ್ – ಬೆಂಗಳೂರು
ಚೇತನ್ ಎಲ್ ಆರ್ – ಬೆಂಗಳೂರು
ಕುಮಾರ್ ಎಲ್ ಆರ್ – ಬೆಂಗಳೂರು
ಕೃತಿಕ್ ಕೃಷ್ಣ – ಗುಲ್ಬರ್ಗ
ನವೀನ್ ಎಂಜಿ – ಹುಬ್ಬಳ್ಳಿ
ಗೌತಮ್ ಸಾಗರ್ – ಹುಬ್ಬಳ್ಳಿ
ಎಂ ವೆಂಕಟೇಶ್ – ಮಂಗಳೂರು
ನಿಕಿನ್ ಜೋಶಿ – ಮಂಗಳೂರು
ದರ್ಶನ್ ಎಂ ಬಿ – ಶಿವಮೊಗ್ಗ
ಉತ್ತಮ್ ಅಯ್ಯಪ್ಪ – ಶಿವಮೊಗ್ಗ
ಇವರುಗಳು ಇಂದು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ಮಹಾರಾಜ ಟಿ-೨೦ ಟ್ರೋಫಿಗಾಗಿ ನಡೆಯುವ ಪಂದ್ಯದ ವಿವರ
ಪ್ರತಿ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಹಾಗೂ ಪ್ಯಾನ್ ಕೋಡ್ ಆಪ್ ನಲ್ಲಿ ಪ್ರಸಾರವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಹೊಸ ಲೀಗ್ 6 ತಂಡಗಳ ಟೂರ್ನಿಯಾಗಿದ್ದು, ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ರಾಯಚೂರು ಹಾಗೂ ಶಿವಮೊಗ್ಗ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಈ ತಂಡಗಳ ಪ್ರಾಯೋಜಕತ್ವವನ್ನು ವಿವಿಧ ಸಂಸ್ಥೆಗಳು ವಹಿಸಿಕೊಂಡಿವೆ. ಟೂರ್ನಿಯ ಪಂದ್ಯಗಳಿಗೆ ಮೈಸೂರು ಹಾಗೂ ಬೆಂಗಳೂರು ಆತಿಥ್ಯ ವಹಿಸಲಿವೆ. ಆರಂಭಿಕ 18 ಪಂದ್ಯಗಳು ಮೈಸೂರಿನಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ 16 ಪಂದ್ಯಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಆಟಗಾರರನ್ನು ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪುಗಳಾಗಿ ವಿಂಗಡಿಸಲಾಗಿದ್ದು, ‘ಎ’ ಗುಂಪಿನ ಆಟಗಾರರು ತಲಾ 5 ಲಕ್ಷ ರೂಪಾಯಿ ಪಡೆಯಲಿದ್ದಾರೆ. ‘ಬಿ’ ಗುಂಪಿಗೆ 2 ಲಕ್ಷ, ‘ಸಿ’ ಗುಂಪಿಗೆ 1 ಲಕ್ಷ ಹಾಗೂ ‘ಡಿ’ ಗುಂಪಿಗೆ 50,000 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…