ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ನಗರದ ಹೆಸರಾಂತ ದೇವಸ್ಥಾನವಾದ ಚಾಮುಂಡೇಶ್ವರಿ ಬೆಟ್ಟದಿದಂ ತಮ್ಮ ಪ್ರಯಾಣವನ್ನು ಇಂದು ಆರಂಭಿಸಿದ್ದಾರೆ. ದೇವರ ಆಶೀರ್ವಾದದೊಂದಿಗೆ ನಮ್ಮ ಪ್ರಯಾಣವನ್ನು ಪ್ರಾರಂಭಿಸುವುದು ಯೋಧರ ಸಂಪ್ರದಾಯವಾಗಿದೆ. ಈ ವರ್ಷ ಮಹಾರಾಜ ಟ್ರೋಫಿಗೆ ಸ್ಪರ್ಧಿಸುವ ಎಲ್ಲಾ ಆಟಗಾರರ ಉತ್ತಮ ಆರೋಗ್ಯಕ್ಕಾಗಿ ಮತ್ತು ಉತ್ತಮ ಕ್ರಿಕೆಟ್ಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅರುಣ್ ರಂಗ ಅವರು ತಿಳಿಸಿದರು.
ಮೈಸೂರು ವಲಯದಿಂದ ಆಯ್ಕೆಗೊಂಡಿರು ಸ್ಪರ್ಧಿಗಳು
ಜೆ ಸುಚಿತ್ – ಬೆಂಗಳೂರು
ಚೇತನ್ ಎಲ್ ಆರ್ – ಬೆಂಗಳೂರು
ಕುಮಾರ್ ಎಲ್ ಆರ್ – ಬೆಂಗಳೂರು
ಕೃತಿಕ್ ಕೃಷ್ಣ – ಗುಲ್ಬರ್ಗ
ನವೀನ್ ಎಂಜಿ – ಹುಬ್ಬಳ್ಳಿ
ಗೌತಮ್ ಸಾಗರ್ – ಹುಬ್ಬಳ್ಳಿ
ಎಂ ವೆಂಕಟೇಶ್ – ಮಂಗಳೂರು
ನಿಕಿನ್ ಜೋಶಿ – ಮಂಗಳೂರು
ದರ್ಶನ್ ಎಂ ಬಿ – ಶಿವಮೊಗ್ಗ
ಉತ್ತಮ್ ಅಯ್ಯಪ್ಪ – ಶಿವಮೊಗ್ಗ
ಇವರುಗಳು ಇಂದು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ.
ಮಹಾರಾಜ ಟಿ-೨೦ ಟ್ರೋಫಿಗಾಗಿ ನಡೆಯುವ ಪಂದ್ಯದ ವಿವರ
ಪ್ರತಿ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಹಾಗೂ ಪ್ಯಾನ್ ಕೋಡ್ ಆಪ್ ನಲ್ಲಿ ಪ್ರಸಾರವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಹೊಸ ಲೀಗ್ 6 ತಂಡಗಳ ಟೂರ್ನಿಯಾಗಿದ್ದು, ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ರಾಯಚೂರು ಹಾಗೂ ಶಿವಮೊಗ್ಗ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಈ ತಂಡಗಳ ಪ್ರಾಯೋಜಕತ್ವವನ್ನು ವಿವಿಧ ಸಂಸ್ಥೆಗಳು ವಹಿಸಿಕೊಂಡಿವೆ. ಟೂರ್ನಿಯ ಪಂದ್ಯಗಳಿಗೆ ಮೈಸೂರು ಹಾಗೂ ಬೆಂಗಳೂರು ಆತಿಥ್ಯ ವಹಿಸಲಿವೆ. ಆರಂಭಿಕ 18 ಪಂದ್ಯಗಳು ಮೈಸೂರಿನಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ 16 ಪಂದ್ಯಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಆಟಗಾರರನ್ನು ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪುಗಳಾಗಿ ವಿಂಗಡಿಸಲಾಗಿದ್ದು, ‘ಎ’ ಗುಂಪಿನ ಆಟಗಾರರು ತಲಾ 5 ಲಕ್ಷ ರೂಪಾಯಿ ಪಡೆಯಲಿದ್ದಾರೆ. ‘ಬಿ’ ಗುಂಪಿಗೆ 2 ಲಕ್ಷ, ‘ಸಿ’ ಗುಂಪಿಗೆ 1 ಲಕ್ಷ ಹಾಗೂ ‘ಡಿ’ ಗುಂಪಿಗೆ 50,000 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…