ಮೈಸೂರು: ಭಾರೀ ಮಳೆಯಿಂದಾಗಿ ಇತ್ತೀಚೆಗೆ ಕುಸಿದು ಬಿದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ತರಗತಿಗಳು ಶುಕ್ರವಾರದಿಂದ ಹೊಸ ಕಟ್ಟಡದಲ್ಲಿ ಆರಂಭವಾಗಲಿವೆ.
ಪಾರಂಪರಿಕ ಕಟ್ಟಡ ಆಗಿರುವ ಮಹಾರಾಣಿ ವಿಜ್ಞಾನ ಕಾಲೇಜಿನ ಒಂದು ಭಾಗ ಇತ್ತೀಚೆಗೆ ಕುಸಿದು ಬಿದ್ದ ಪರಿಣಾಮ ಆ ಭಾಗದಲ್ಲಿದ್ದ ರಸಾಯನ ಶಾಸ್ತ್ರ ಪ್ರಯೋಗಾಲಯ ಸಂಪೂರ್ಣ ಹಾಳಾಗಿದ್ದರೆ, ಪ್ರಾಣಿಶಾಸ್ತ್ರ ವಿಭಾಗದ ಪ್ರಯೋಗಾಲಯ ಭಾಗಶಃ ಹಾನಿಗೊಳಗಾಗಿತ್ತು. ಹೀಗಾಗಿ ಅಂದಿನಿಂದ ಕಾಲೇಜಿನಲ್ಲಿ ಪ್ರಯೋಗಾಲಯ ನಡೆಯುತ್ತಿರಲಿಲ್ಲ. ಜತೆಗೆ ಏಕಾಏಕಿ ಕಟ್ಟಡ ಕುಸಿದುಬಿದ್ದ ಪರಿಣಾಮ ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ಭಯಭೀತರಾಗಿದ್ದರು. ದೀಪಾವಳಿ ರಜೆ ಮುಗಿಸಿ ಗುರುವಾರ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ಅವರು ಧೈರ್ಯ ತುಂಬುವ ಸಲುವಾಗಿ ಸಭೆ ನಡೆಸಿ, ಗಾಳಿ ಸುದ್ದಿಗಳನ್ನು ನಂಬದಿರಿ.. ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದೆ ನಾಳೆಯಿಂದ ಹೊಸ ಕಟ್ಟಡದಲ್ಲಿ ತರಗತಿಗಳು ನಡೆಯಲಿದ್ದು, ಆತಂಕ ಬಿಟ್ಟು ತರಗತಿಗಳಿಗೆ ಹಾಜರಾಗುವಂತೆ ಕಿವಿಮಾತು ಹೇಳಿದರು.
ನಿರಂತರ ಮಳೆಯಿಂದಾಗಿ ಶಿಥಿಲವಾಗಿದ್ದ ಕಾಲೇಜು ಕಟ್ಟಡ ಇತ್ತೀಚೆಗೆ ಹಾಡ ಹಗಲೇ ಕುಸಿದು ಬಿದ್ದಿದ್ದು ಆತಂಕಕ್ಕೆ ಕಾರಣವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲಲಿತಾ ಕೆ. ನೇತೃತ್ವದ ನಾಲ್ವರು ಇಂಜಿನಿಯರುಗಳು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರುಗಳ ತಂಡ ಕುಸಿದು ಬಿದ್ದ ಕಾಲೇಜು ಕಟ್ಟಡ ಬಳಕೆಗೆ ಯೋಗ್ಯವೇ? ಎಂಬುದನ್ನು ಪರಿಶೀಲಿಸಿ ಹೋಗಿದ್ದು, ಇನ್ನಷ್ಟೇ ವರದಿ ಸಲ್ಲಿಸಬೇಕಿದೆ.
ಈ ನಡುವೆ ಕುಸಿದು ಬಿದ್ದ ಪ್ರಯೋಗಾಲಗಳೆಡೆಗೆ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿ ತೆರಳದಂತೆ ಕಾರಿಡಾರ್ ನಲ್ಲಿ ಹಗ್ಗ ಕಟ್ಟಿ ನಿರ್ಬಂಧಿಸಲಾಗಿದೆ. ಶುಕ್ರವಾರದಿಂದ ಕಾಲೇಜು ಕ್ಯಾಂಪಸ್ ಆವರಣದಲ್ಲಿ ಹೊಸದಾಗಿ ನಿರ್ಮಿಸಿರುವ ಮೂರು ಅಂತಸ್ತುಗಳ ಹೊಸ ಕಟ್ಟಡದಲ್ಲಿನ ೨೦ ಕೊಠಡಿಗಳನ್ನು ಬಳಸಿಕೊಂಡು ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸದ್ಯ ಭಾಗಶಃ ಹಾನಿಯಾಗಿರುವ ಪ್ರಾಣಿಶಾಸ್ತ್ರ ವಿಭಾಗದ ಪ್ರಯೋಗಾಲಯದ ಕೆಲ ಪರಿಕರಗಳು ಬಳಕೆಗೆ ಸಿಗಲಿದ್ದರೆ, ರಸಾಯನ ಶಾಸ್ತ್ರ ವಿಭಾಗದ ಪ್ರಯೋಗಾಲಯ ಸಂಪೂರ್ಣ ಕುಸಿದಿರುವುದರಿಂದ ಅಲ್ಲಿನ ಯಾವುದೇ ಪರಿಕರಗಳನ್ನೂ ಹೊರತೆಗೆಯಲಾಗಿಲ್ಲ. ಹೀಗಾಗಿ ರಸಾಯನ ಶಾಸ್ತ್ರ ವಿಭಾಗದ ಪ್ರಯೋಗಾಲಯಕ್ಕೆ ಹೊಸದಾಗಿಯೇ ಪರಿಕರಗಳನ್ನು ಖರೀದಿಸಬೇಕಿದೆ.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…