ಜಿಲ್ಲೆಗಳು

ಇಂದಿನಿಂದ ಮಹಾರಾಣಿ ವಿಜ್ಞಾನ ಕಾಲೇಜು ಹೊಸ ಕಟ್ಟಡದಲ್ಲಿ ಕಾರ್ಯಾರಂಭ

ಮೈಸೂರು: ಭಾರೀ ಮಳೆಯಿಂದಾಗಿ ಇತ್ತೀಚೆಗೆ ಕುಸಿದು ಬಿದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ತರಗತಿಗಳು ಶುಕ್ರವಾರದಿಂದ ಹೊಸ ಕಟ್ಟಡದಲ್ಲಿ ಆರಂಭವಾಗಲಿವೆ.

ಪಾರಂಪರಿಕ ಕಟ್ಟಡ ಆಗಿರುವ ಮಹಾರಾಣಿ ವಿಜ್ಞಾನ ಕಾಲೇಜಿನ ಒಂದು ಭಾಗ ಇತ್ತೀಚೆಗೆ ಕುಸಿದು ಬಿದ್ದ ಪರಿಣಾಮ ಆ ಭಾಗದಲ್ಲಿದ್ದ ರಸಾಯನ ಶಾಸ್ತ್ರ ಪ್ರಯೋಗಾಲಯ ಸಂಪೂರ್ಣ ಹಾಳಾಗಿದ್ದರೆ, ಪ್ರಾಣಿಶಾಸ್ತ್ರ ವಿಭಾಗದ ಪ್ರಯೋಗಾಲಯ ಭಾಗಶಃ ಹಾನಿಗೊಳಗಾಗಿತ್ತು. ಹೀಗಾಗಿ ಅಂದಿನಿಂದ ಕಾಲೇಜಿನಲ್ಲಿ ಪ್ರಯೋಗಾಲಯ ನಡೆಯುತ್ತಿರಲಿಲ್ಲ. ಜತೆಗೆ ಏಕಾಏಕಿ ಕಟ್ಟಡ ಕುಸಿದುಬಿದ್ದ ಪರಿಣಾಮ ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ಭಯಭೀತರಾಗಿದ್ದರು. ದೀಪಾವಳಿ ರಜೆ ಮುಗಿಸಿ ಗುರುವಾರ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ಅವರು ಧೈರ್ಯ ತುಂಬುವ ಸಲುವಾಗಿ ಸಭೆ ನಡೆಸಿ, ಗಾಳಿ ಸುದ್ದಿಗಳನ್ನು ನಂಬದಿರಿ.. ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದೆ ನಾಳೆಯಿಂದ ಹೊಸ ಕಟ್ಟಡದಲ್ಲಿ ತರಗತಿಗಳು ನಡೆಯಲಿದ್ದು, ಆತಂಕ ಬಿಟ್ಟು ತರಗತಿಗಳಿಗೆ ಹಾಜರಾಗುವಂತೆ ಕಿವಿಮಾತು ಹೇಳಿದರು.

ನಿರಂತರ ಮಳೆಯಿಂದಾಗಿ ಶಿಥಿಲವಾಗಿದ್ದ ಕಾಲೇಜು ಕಟ್ಟಡ ಇತ್ತೀಚೆಗೆ ಹಾಡ ಹಗಲೇ ಕುಸಿದು ಬಿದ್ದಿದ್ದು ಆತಂಕಕ್ಕೆ ಕಾರಣವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲಲಿತಾ ಕೆ. ನೇತೃತ್ವದ ನಾಲ್ವರು ಇಂಜಿನಿಯರುಗಳು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರುಗಳ ತಂಡ ಕುಸಿದು ಬಿದ್ದ ಕಾಲೇಜು ಕಟ್ಟಡ ಬಳಕೆಗೆ ಯೋಗ್ಯವೇ? ಎಂಬುದನ್ನು ಪರಿಶೀಲಿಸಿ ಹೋಗಿದ್ದು, ಇನ್ನಷ್ಟೇ ವರದಿ ಸಲ್ಲಿಸಬೇಕಿದೆ.

ಈ ನಡುವೆ ಕುಸಿದು ಬಿದ್ದ ಪ್ರಯೋಗಾಲಗಳೆಡೆಗೆ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿ ತೆರಳದಂತೆ ಕಾರಿಡಾರ್ ನಲ್ಲಿ ಹಗ್ಗ ಕಟ್ಟಿ ನಿರ್ಬಂಧಿಸಲಾಗಿದೆ. ಶುಕ್ರವಾರದಿಂದ ಕಾಲೇಜು ಕ್ಯಾಂಪಸ್ ಆವರಣದಲ್ಲಿ ಹೊಸದಾಗಿ ನಿರ್ಮಿಸಿರುವ ಮೂರು ಅಂತಸ್ತುಗಳ ಹೊಸ ಕಟ್ಟಡದಲ್ಲಿನ ೨೦ ಕೊಠಡಿಗಳನ್ನು ಬಳಸಿಕೊಂಡು ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸದ್ಯ ಭಾಗಶಃ ಹಾನಿಯಾಗಿರುವ ಪ್ರಾಣಿಶಾಸ್ತ್ರ ವಿಭಾಗದ ಪ್ರಯೋಗಾಲಯದ ಕೆಲ ಪರಿಕರಗಳು ಬಳಕೆಗೆ ಸಿಗಲಿದ್ದರೆ, ರಸಾಯನ ಶಾಸ್ತ್ರ ವಿಭಾಗದ ಪ್ರಯೋಗಾಲಯ ಸಂಪೂರ್ಣ ಕುಸಿದಿರುವುದರಿಂದ ಅಲ್ಲಿನ ಯಾವುದೇ ಪರಿಕರಗಳನ್ನೂ ಹೊರತೆಗೆಯಲಾಗಿಲ್ಲ. ಹೀಗಾಗಿ ರಸಾಯನ ಶಾಸ್ತ್ರ ವಿಭಾಗದ ಪ್ರಯೋಗಾಲಯಕ್ಕೆ ಹೊಸದಾಗಿಯೇ ಪರಿಕರಗಳನ್ನು ಖರೀದಿಸಬೇಕಿದೆ.

 

 

 

andolana

Recent Posts

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

19 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

36 mins ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

49 mins ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

1 hour ago

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

3 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

5 hours ago