ಜಿಲ್ಲೆಗಳು

ಮಹಾರಾಷ್ಟ್ರ ಸಿಎಂ ವಿರುದ್ಧ ಪ್ರತಿಭಟನೆ

 ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ   ಸೇರಬೇಕೆಂಬ ಹೇಳಿಕೆಗೆ ಖಂಡನೆ

ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳು ಮಹಾರಾಷ್ಟçಕ್ಕೆ ಸೇರಬೇಕು ಎಂದು ಹೇಳಿಕೆ ನೀಡಿರುವ ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ
ತೆರಳಿದ ಕಾರ್ಯಕರ್ತರು, ಮಹಾರಾಷ್ಟ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಏಕನಾಥ್ ಶಿಂಧೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸರ್ಕಾರ ಪದೇ ಪದೆ ಗಡಿಕ್ಯಾತೆ ತೆಗೆಯುತ್ತಿದೆ. ಕಳೆದ ೨-೩ ದಿನಗಳಿಂದ ಏಕನಾಥ್ ಶಿಂಧೆ ಅವರು ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುತ್ತೇವೆ ಎಂದು ಉದ್ದಟತನದ ಹೇಳಿಕೆ ನೀಡಿದ್ದಾರೆ. ಈ ಮೂಲಕ ೨ ರಾಜ್ಯಗಳ ನಡುವೆ ಸಂಘರ್ಷವನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಕರ್ನಾಟಕದ ಸೊಲ್ಲಾಪುರ, ಸಾಂಗ್ಲಿ ಸೇರಿದಂತೆ ಇತರೆ ಅಚ್ಚ ಕನ್ನಡ ಮಾತಾಡುವ ಪ್ರದೇಶಗಳು ಮಹಾರಾಷ್ಟçದಲ್ಲಿವೆ. ನಾವು ಇವುಗಳನ್ನು ಕರ್ನಾಟಕಕ್ಕೆ ಬಿಟ್ಟುಕೊಡಿ ಎಂಬ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾರಾಷ್ಟç ಸರಕಾರ ಗಡಿಕ್ಯಾತೆ ತೆಗೆಯುತ್ತಿದ್ದರೂ, ರಾಜ್ಯದ ಸಂಸದರು ಮೌನ ವಹಿಸಿದ್ದಾರೆ.
ಕೂಡಲೇ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳುವ ವಿಚಾರದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಚಳವಳಿ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

44 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

52 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

58 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

16 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago