Mysore
23
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಬಳಿ ಜಮಾವಣೆಗೊಂಡ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಎಂಇಎಸ್ ಪುಂಡರು ಹಲವು ಕಡೆ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಿ, ಮಸಿ ಬಳಿದು ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ ಅಂತಹವರ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆಯಿಂದ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರು ಆತಂಕಕ್ಕೊಳಗಾಗಿದ್ದಾರೆ. ಅಲ್ಲಿನ ಕನ್ನಡಿಗರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು. ಮಹಾಜನ್ ವರದಿಯೇ ಅಂತಿಮ ಎಂಬುದನ್ನು ಮಹಾರಾಷ್ಟ್ರ ಅರಿತುಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರವೀಣ್ ಕುಮಾರ್, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ರಘು, ಗಣೇಶ್, ಸುನಂದ್, ಲಾಲು, ಅಸ್ಲಂ, ಮಂಜುನಾಥ, ಶಿವರಾಜು ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!