ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಬಳಿ ಜಮಾವಣೆಗೊಂಡ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಎಂಇಎಸ್ ಪುಂಡರು ಹಲವು ಕಡೆ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಿ, ಮಸಿ ಬಳಿದು ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ ಅಂತಹವರ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆಯಿಂದ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರು ಆತಂಕಕ್ಕೊಳಗಾಗಿದ್ದಾರೆ. ಅಲ್ಲಿನ ಕನ್ನಡಿಗರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು. ಮಹಾಜನ್ ವರದಿಯೇ ಅಂತಿಮ ಎಂಬುದನ್ನು ಮಹಾರಾಷ್ಟ್ರ ಅರಿತುಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರವೀಣ್ ಕುಮಾರ್, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ರಘು, ಗಣೇಶ್, ಸುನಂದ್, ಲಾಲು, ಅಸ್ಲಂ, ಮಂಜುನಾಥ, ಶಿವರಾಜು ಇತರರಿದ್ದರು.
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…
ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು…
ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ…