ಜಿಲ್ಲೆಗಳು

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಬಳಿ ಜಮಾವಣೆಗೊಂಡ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಎಂಇಎಸ್ ಪುಂಡರು ಹಲವು ಕಡೆ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಿ, ಮಸಿ ಬಳಿದು ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ ಅಂತಹವರ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆಯಿಂದ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರು ಆತಂಕಕ್ಕೊಳಗಾಗಿದ್ದಾರೆ. ಅಲ್ಲಿನ ಕನ್ನಡಿಗರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು. ಮಹಾಜನ್ ವರದಿಯೇ ಅಂತಿಮ ಎಂಬುದನ್ನು ಮಹಾರಾಷ್ಟ್ರ ಅರಿತುಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರವೀಣ್ ಕುಮಾರ್, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ರಘು, ಗಣೇಶ್, ಸುನಂದ್, ಲಾಲು, ಅಸ್ಲಂ, ಮಂಜುನಾಥ, ಶಿವರಾಜು ಇತರರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

44 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

52 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

58 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

17 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago