ಜಿಲ್ಲೆಗಳು

ಮಹರ್ಷಿ ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ – ಎಂ ಕೆ ಸೋಮಶೇಖರ್.

ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ ಮಹದೇವಸ್ವಾಮಿ,ಮೋಹನ್,ಯುವ ಕಾಂಗ್ರೆಸ್ ಮುಖಂಡರಾದ ಚಂದನ್ ವಿಜಯ್ ಕುಮಾರ್,ಚಂದು,ಗುಂಡಾ,ನಂದನ್ ನಾಯಕ್,ಕಿರಣ್,ಪ್ರಶಾಂತ್,ಜಗನ್ನಾಥ್,ಐಟಿ ಸೆಲ್ ಅಧ್ಯಕ್ಷ ನಿರಾಲ್ ಶಾ ಮತ್ತಿತರರು ಉಪಸ್ಥಿತರಿದ್ದರು.ನಂತರ ಸಾರ್ವಜನಿಕರಿಗೆ ಸಿಹಿ ವಿರಿಸಲಾಯಿತು.
ನಂತರ ಮಾತನಾಡಿದ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಬೇಡನಾಗಿದ್ದ ವ್ಯಕ್ತಿ ಸತತ ಪರಿಶ್ರಮ ಹಾಗೂ ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡು ಪ್ರತಿಯೊಬ್ಬರಿಗೂ ಪ್ರೇರಣೆಯಾದರು ಎಂದು ತಿಳಿಸಿದರು.ಸತತ ಪರಿಶ್ರಮದಿಂದ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹಾರಾಜರು ಸಾಕ್ಷಿಯಾಗಿದ್ದಾರೆ.ವಾಲ್ಮೀಕಿಯವರು ಚಿಂತಕರು,ತತ್ವಜ್ಞಾನಿಗಳು,ಶಿಕ್ಷಣ ಪ್ರೇಮಿಯಾಗಿದ್ದರು.ರಾಮಾಯಣವನ್ನು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದರು.ರಾಮಾಯಣದಲ್ಲಿನ ಪ್ರಕೃತಿ ಸೌಂದರ್ಯ,ಆದರ್ಶ ವ್ಯಕ್ತಿಯ ಚಿತ್ರಣ,ಕೌಟುಂಬಿಕ ಮೌಲ್ಯಗಳು,ಮಾನವೀಯತೆ ಹಾಗೂ ಸಾಮಾಜಿಕ ಮೌಲ್ಯಗಳು,ಸಾರ್ವಕಾಲಿಕ ಸತ್ಯ ಎಂದರು.ವ್ಯಕ್ತಿ ನಕರಾತ್ಮಕ ಭಾವನೆಗಳನ್ನು ತೊಡೆದು ಆತ್ಮ ವಿಶ್ವಾಸದಿಂದ ಮುನ್ನೆಡೆದರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದಕ್ಕೆ ವಾಲ್ಮೀಕಿಯವರ ಜೀವನ ಚರಿತ್ರೆಯೇ ಸಾಕ್ಷಿಯಾಗಿದೆ ಎಂದು ನೆನೆದರು.

andolanait

Recent Posts

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

25 mins ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

2 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

2 hours ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

3 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

3 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

3 hours ago