ಜಿಲ್ಲೆಗಳು

ಮಹರ್ಷಿ ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ – ಎಂ ಕೆ ಸೋಮಶೇಖರ್.

ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ ಮಹದೇವಸ್ವಾಮಿ,ಮೋಹನ್,ಯುವ ಕಾಂಗ್ರೆಸ್ ಮುಖಂಡರಾದ ಚಂದನ್ ವಿಜಯ್ ಕುಮಾರ್,ಚಂದು,ಗುಂಡಾ,ನಂದನ್ ನಾಯಕ್,ಕಿರಣ್,ಪ್ರಶಾಂತ್,ಜಗನ್ನಾಥ್,ಐಟಿ ಸೆಲ್ ಅಧ್ಯಕ್ಷ ನಿರಾಲ್ ಶಾ ಮತ್ತಿತರರು ಉಪಸ್ಥಿತರಿದ್ದರು.ನಂತರ ಸಾರ್ವಜನಿಕರಿಗೆ ಸಿಹಿ ವಿರಿಸಲಾಯಿತು.
ನಂತರ ಮಾತನಾಡಿದ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಬೇಡನಾಗಿದ್ದ ವ್ಯಕ್ತಿ ಸತತ ಪರಿಶ್ರಮ ಹಾಗೂ ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡು ಪ್ರತಿಯೊಬ್ಬರಿಗೂ ಪ್ರೇರಣೆಯಾದರು ಎಂದು ತಿಳಿಸಿದರು.ಸತತ ಪರಿಶ್ರಮದಿಂದ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹಾರಾಜರು ಸಾಕ್ಷಿಯಾಗಿದ್ದಾರೆ.ವಾಲ್ಮೀಕಿಯವರು ಚಿಂತಕರು,ತತ್ವಜ್ಞಾನಿಗಳು,ಶಿಕ್ಷಣ ಪ್ರೇಮಿಯಾಗಿದ್ದರು.ರಾಮಾಯಣವನ್ನು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದರು.ರಾಮಾಯಣದಲ್ಲಿನ ಪ್ರಕೃತಿ ಸೌಂದರ್ಯ,ಆದರ್ಶ ವ್ಯಕ್ತಿಯ ಚಿತ್ರಣ,ಕೌಟುಂಬಿಕ ಮೌಲ್ಯಗಳು,ಮಾನವೀಯತೆ ಹಾಗೂ ಸಾಮಾಜಿಕ ಮೌಲ್ಯಗಳು,ಸಾರ್ವಕಾಲಿಕ ಸತ್ಯ ಎಂದರು.ವ್ಯಕ್ತಿ ನಕರಾತ್ಮಕ ಭಾವನೆಗಳನ್ನು ತೊಡೆದು ಆತ್ಮ ವಿಶ್ವಾಸದಿಂದ ಮುನ್ನೆಡೆದರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದಕ್ಕೆ ವಾಲ್ಮೀಕಿಯವರ ಜೀವನ ಚರಿತ್ರೆಯೇ ಸಾಕ್ಷಿಯಾಗಿದೆ ಎಂದು ನೆನೆದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago