ಜಿಲ್ಲೆಗಳು

ಮಹರ್ಷಿ ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ – ಎಂ ಕೆ ಸೋಮಶೇಖರ್.

ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ ಮಹದೇವಸ್ವಾಮಿ,ಮೋಹನ್,ಯುವ ಕಾಂಗ್ರೆಸ್ ಮುಖಂಡರಾದ ಚಂದನ್ ವಿಜಯ್ ಕುಮಾರ್,ಚಂದು,ಗುಂಡಾ,ನಂದನ್ ನಾಯಕ್,ಕಿರಣ್,ಪ್ರಶಾಂತ್,ಜಗನ್ನಾಥ್,ಐಟಿ ಸೆಲ್ ಅಧ್ಯಕ್ಷ ನಿರಾಲ್ ಶಾ ಮತ್ತಿತರರು ಉಪಸ್ಥಿತರಿದ್ದರು.ನಂತರ ಸಾರ್ವಜನಿಕರಿಗೆ ಸಿಹಿ ವಿರಿಸಲಾಯಿತು.
ನಂತರ ಮಾತನಾಡಿದ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಬೇಡನಾಗಿದ್ದ ವ್ಯಕ್ತಿ ಸತತ ಪರಿಶ್ರಮ ಹಾಗೂ ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡು ಪ್ರತಿಯೊಬ್ಬರಿಗೂ ಪ್ರೇರಣೆಯಾದರು ಎಂದು ತಿಳಿಸಿದರು.ಸತತ ಪರಿಶ್ರಮದಿಂದ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹಾರಾಜರು ಸಾಕ್ಷಿಯಾಗಿದ್ದಾರೆ.ವಾಲ್ಮೀಕಿಯವರು ಚಿಂತಕರು,ತತ್ವಜ್ಞಾನಿಗಳು,ಶಿಕ್ಷಣ ಪ್ರೇಮಿಯಾಗಿದ್ದರು.ರಾಮಾಯಣವನ್ನು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದರು.ರಾಮಾಯಣದಲ್ಲಿನ ಪ್ರಕೃತಿ ಸೌಂದರ್ಯ,ಆದರ್ಶ ವ್ಯಕ್ತಿಯ ಚಿತ್ರಣ,ಕೌಟುಂಬಿಕ ಮೌಲ್ಯಗಳು,ಮಾನವೀಯತೆ ಹಾಗೂ ಸಾಮಾಜಿಕ ಮೌಲ್ಯಗಳು,ಸಾರ್ವಕಾಲಿಕ ಸತ್ಯ ಎಂದರು.ವ್ಯಕ್ತಿ ನಕರಾತ್ಮಕ ಭಾವನೆಗಳನ್ನು ತೊಡೆದು ಆತ್ಮ ವಿಶ್ವಾಸದಿಂದ ಮುನ್ನೆಡೆದರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದಕ್ಕೆ ವಾಲ್ಮೀಕಿಯವರ ಜೀವನ ಚರಿತ್ರೆಯೇ ಸಾಕ್ಷಿಯಾಗಿದೆ ಎಂದು ನೆನೆದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago