ಜಿಲ್ಲೆಗಳು

ವಾಲ್ಮೀಕಿ ಜಾಗೃತಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ : ಪ್ರಸನ್ನಾನಂದದಪುರಿ ಸ್ವಾಮೀಜಿಗಳು ಮನವಿ

ಹನೂರು: ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆಗೆ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಧ್ಯಾಕ್ಷರಾದ ಶ್ರೀ ಪ್ರಸನ್ನಾನಂದದಪುರಿ ಸ್ವಾಮೀಜಿಗಳು ಮನವಿ ಮಾಡಿದರು. ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನಾಯಕ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿದರು.

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು, ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಪೆ.8.2.2023ರಂದು ಜರುಗಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆ ಈ ಬಾರಿ ಹಲವು ವಿಶೇಷತೆಯಿಂದ ಕೂಡಿದೆ. ಸತತ ಹೋರಾಟದ ಫಲವಾಗಿ ಎಸ್. ಟಿ.ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಸುಸಂದರ್ಭದಲ್ಲಿ ಜರುಗಲಿರುವ ಎರಡು ದಿನಗಳ ಜಾತ್ರಾ ಮಹೋತ್ಸವದಲ್ಲಿ ಶ್ರೀ ಮಠದ 25ನೇ ವರ್ಷದ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾ ಸ್ವಾಮೀಜಿಯವರ 16ನೇ ವರ್ಷದ ಪುಣ್ಯರಾಧನೆ, ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿಯವರ 15ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಜೊತೆಗೆ ನೂತನ ರಥ ಲೋಕಾರ್ಪಣೆ ಕಾರ್ಯಕ್ರಮಗಳು ಜರಗಲಿವೆ. ಈ ಹಿನ್ನಲೆಯಲ್ಲಿ ಸಮುದಾಯದ ಬಂಧುಗಳು ಆಗಮಿಸಿ ಎಂದು ಮನವಿ ಮಾಡಿದರು.

ಮೀಸಲಾತಿ ಹೆಚ್ಚಳ ಬೆಂಬಲಕ್ಕೆ ನಿಂತ ಗಣ್ಯರಿಗೆ ಅಭಿನಂದನೆ ಸಲ್ಲಿಸಿದ ಶ್ರೀಗಳು: ರಾಜ್ಯದ ನಾಯಕ ಸಮುದಾಯದ ಬೆಂಬಲ ಮತ್ತು ಹೋರಾಟದ ಫಲವಾಗಿ ಇಂದು ಎಸ್. ಟಿ. ಮೀಸಲಾತಿ ಶೇ.7 ಹೆಚ್ಚಳವಾಗಿರುವುದು ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿೃದ್ಧಿಗೆ ಸಹಕಾರಿಯಾಗಿದೆ. ಈ ಒಂದು ಹೋರಾಟಕ್ಕೆ ಪಕ್ಷಾತೀತವಾಗಿ ಸಹಕರಿಸಿದ ಎಲ್ಲರಿಗೂ ಈಗಾಗಲೇ ಕೃತಜ್ಞತೆಯನ್ನು ಸಲ್ಲಿಸಿದ್ದೇವೆ. ಮೀಸಲಾತಿ ಹೋರಾಟದ ಯಶಸ್ವಿಗೆ ಸ್ಪಂದಿಸಿದ ಹನೂರು ತಾಲ್ಲೂಕಿನ ನಾಯಕ ಸಮುದಾಯದವರಿಗೆ ಹಾಗೂ ಈ ಭಾಗದ ಶಾಸಕ ಆರ್. ನರೇಂದ್ರ ಮತ್ತು ಮಾಜಿ ಸಂಸದ ದೃವನಾರಾಯಣ ರವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹನೂರು ತಾಲೂಕಿನ ವಿವಿಧ ಗ್ರಾಮಗಳ ನಾಯಕ ಸಮುದಾಯದವರು ಉಪಸ್ಥಿತರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago