ಜಿಲ್ಲೆಗಳು

ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ಶಾಸಕ ಆರ್‌ ನರೇಂದ್ರ

ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.

ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ-ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಸರ್ಕಾರ ಎಸ್ಟಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 241 ದಿನಗಳ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಪ್ರಯತ್ನಕ್ಕೆ ನ್ಯಾಯ ದೊರಕಿದೆ. ಅವರಿಗೆ ನಾನು ನಮನಗಳನ್ನು ಸಲ್ಲಿಸುತ್ತೇನೆ. ರಾಜ್ಯ ಸರ್ಕಾರ ಶೀಘ್ರದಲ್ಲೇ ಅಸೆಂಬ್ಲಿಯಲ್ಲಿ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟು ಮೀಸಲಾತಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಮುಖಂಡ ಪಾಳ್ಯ ಕೃಷ್ಣ ಅವರು ಮಾತನಾಡಿ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲು ಕಾರಣಕರ್ತರಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಹಾಗೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಶಾಸಕರುಗಳು, ಸರ್ಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳು, ತಹಸಿಲ್ದಾರ್ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಪ ಪಂ ಮುಖ್ಯಾಧಿಕಾರಿ ಪರಶಿವಯ್ಯ, ದೈಹಿಕ ಪರಿವೀಕ್ಷಕ ಮಹದೇವ್,ಆರ್ ಎಫ್ ಒ ಪ್ರವೀಣ್,ಲೋಕ ಲೋಕೋಪಯೋಗಿ ಕಿರಿಯ ಅಭಿಯಂತರ ಸತೀಶ್,ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ನಾಯಕ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು, ಯಜಮಾನರುಗಳು ಉಪಸ್ಥಿತರಿದ್ದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago