ಜಿಲ್ಲೆಗಳು

ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ಶಾಸಕ ಆರ್‌ ನರೇಂದ್ರ

ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.

ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ-ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಸರ್ಕಾರ ಎಸ್ಟಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 241 ದಿನಗಳ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಪ್ರಯತ್ನಕ್ಕೆ ನ್ಯಾಯ ದೊರಕಿದೆ. ಅವರಿಗೆ ನಾನು ನಮನಗಳನ್ನು ಸಲ್ಲಿಸುತ್ತೇನೆ. ರಾಜ್ಯ ಸರ್ಕಾರ ಶೀಘ್ರದಲ್ಲೇ ಅಸೆಂಬ್ಲಿಯಲ್ಲಿ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟು ಮೀಸಲಾತಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಮುಖಂಡ ಪಾಳ್ಯ ಕೃಷ್ಣ ಅವರು ಮಾತನಾಡಿ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲು ಕಾರಣಕರ್ತರಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಹಾಗೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಶಾಸಕರುಗಳು, ಸರ್ಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳು, ತಹಸಿಲ್ದಾರ್ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಪ ಪಂ ಮುಖ್ಯಾಧಿಕಾರಿ ಪರಶಿವಯ್ಯ, ದೈಹಿಕ ಪರಿವೀಕ್ಷಕ ಮಹದೇವ್,ಆರ್ ಎಫ್ ಒ ಪ್ರವೀಣ್,ಲೋಕ ಲೋಕೋಪಯೋಗಿ ಕಿರಿಯ ಅಭಿಯಂತರ ಸತೀಶ್,ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ನಾಯಕ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು, ಯಜಮಾನರುಗಳು ಉಪಸ್ಥಿತರಿದ್ದರು.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago