ಅಧಿಕೃತ ದಾಖಲೆ ಸಲ್ಲಿಸಲು ದೂರುದಾರರಿಗೆ ನ್ಯಾಯಾಲಯ ಸೂಚನೆ
ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆ ಪೂಜೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್ ನಿರಾಕರಿಸಿದೆ.ದಸರಾ ಹಬ್ಬದ ವೇಳೆ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೂಜೆಗೆ ಅವಕಾಶ ನಿರಾಕರಿಸಿದ್ದು,
ಈ ಸಂಬಂಧ ಹೆಚ್ಚಿನ ವಿವರಣೆಗಾಗಿಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ತುರ್ತು ನೋಟಿಸ್ ನೀಡಿದೆ.
ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್ ಸಲ್ಲಿಸಿದ್ದ ಅವರು ಪೂಜೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.
ಅಲ್ಲದೇ ಮಹಿಷಾಸುರನ ಪ್ರತಿಮೆಗೆ ಅಗ್ರಪೂಜೆ ಸಲ್ಲಿಸಲು ಅಡ್ಡಿಪಡಿಸಲಾಗುತ್ತಿದೆ. ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ಅರ್ಜಿದಾರರ ಮಧ್ಯಂತರ ಮನವಿಯನ್ನು ಸಾರಾಸಗಟಾಗಿ ಹೈಕೋರ್ಟ್ ತಳ್ಳಿ ಹಾಕಿದೆ.
ಮಹಿಷ ಪ್ರತಿಮೆಗೆ ಪೂಜೆ ಮಾಡಿದ ನಂತರ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಗ್ಗೆ ಯಾವುದಾದರೂ ವಿವರಗಳಿದ್ದರೆ ಸಲ್ಲಿಸಲು ಪೀಠ ಸೂಚನೆ ನೀಡಿತು. ಜತೆಗೆ ಅಧಿಕೃತ ಮತ್ತು ಪರಿಗಣನಾರ್ಹ ವಿವರಗಳು ಲಭ್ಯವಿದ್ದರೆ ಅವುಗಳನ್ನು ಕೋರ್ಟ್ಗೆ ಹಾಜರುಪಡಿಸಿ ಎಂದು ಅರ್ಜಿದಾರರ ಪರ ವಕೀಲ ಅಬೂಬಕರ್ ಶಫಿ ಅವರಿಗೆ ಸೂಚನೆ ನೀಡಿತು.
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…