ಜಿಲ್ಲೆಗಳು

ಮಲೆಮಹದೇಶ್ವರನಿಗೆ ಇನ್ಮುಂದೆ ಆನ್ ಲೈನ್ ಮೂಲಕವೂ ಕಾಣಿಕೆ ಸಲ್ಲಿಸಬಹುದು!

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ.  ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು.

ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲೆಮಹದೇಶ್ವರ ಬೆಟ್ಟ ಶಾಖೆ ಅಧಿಕಾರಿಗಳ ಸಹಕಾರದೊಂದಿಗೆ ದೇವಾಲಯದ ಪ್ರಮುಖ ಕಡೆಗಳಲ್ಲಿ ಇ ಹುಂಡಿ ತೆರೆಯಲಾಗಿದೆ. ಇದರಿಂದ ಭಕ್ತಾದಿಗಳು ಆನ್ಲೈನ್ ಪಾವತಿ ಮಾಡುವ ಮೂಲಕ ಹರಕೆ ಕಾಣಿಕೆ ಸಲ್ಲಿಸಬಹುದಾಗಿದೆ.  ಮಲೆಮಾದೇಶ್ವರ ಗರ್ಭ ಗುಡಿ ಆವರಣದಲ್ಲಿ ಇ ಹುಂಡಿ ಇಡುವ ಮೂಲಕ (ಆನ್ ಲೈನ್ ಪೇಮೆಂಟ್) ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಪಾರುಪತ್ತೇದಾರ ಮಲ್ಲಿಕಾರ್ಜುನ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago