ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ. ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು.
ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲೆಮಹದೇಶ್ವರ ಬೆಟ್ಟ ಶಾಖೆ ಅಧಿಕಾರಿಗಳ ಸಹಕಾರದೊಂದಿಗೆ ದೇವಾಲಯದ ಪ್ರಮುಖ ಕಡೆಗಳಲ್ಲಿ ಇ ಹುಂಡಿ ತೆರೆಯಲಾಗಿದೆ. ಇದರಿಂದ ಭಕ್ತಾದಿಗಳು ಆನ್ಲೈನ್ ಪಾವತಿ ಮಾಡುವ ಮೂಲಕ ಹರಕೆ ಕಾಣಿಕೆ ಸಲ್ಲಿಸಬಹುದಾಗಿದೆ. ಮಲೆಮಾದೇಶ್ವರ ಗರ್ಭ ಗುಡಿ ಆವರಣದಲ್ಲಿ ಇ ಹುಂಡಿ ಇಡುವ ಮೂಲಕ (ಆನ್ ಲೈನ್ ಪೇಮೆಂಟ್) ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಪಾರುಪತ್ತೇದಾರ ಮಲ್ಲಿಕಾರ್ಜುನ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…