ಜಿಲ್ಲೆಗಳು

ಮಳವಳ್ಳಿ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಡಿಡಿಪಿಐಗೆ ಬಿಇಒ ವರದಿ; ಆರೋಪಿ ಶಿಕ್ಷಕನೇ ಅಲ್ಲ

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ.

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, ಆಕೆಯನ್ನು ಕೊಲೆ ಮಾಡಿ, ನೀರಿನ ಸಂಪ್ ಒಳಗೆ ಹಾಕಿ, ಆರೋಪಿ ವಿಕೃತಿ ಮೆರದಿದ್ದ. ಈ ಘಟನೆಯನ್ನು ಇಡೀ ಕರ್ನಾಟಕದ ಜನತೆ ಖಂಡಿಸುವ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದರು.
ಘಟನೆ ಬಳಿಕ ಶಿಕ್ಷಣ ಇಲಾಖೆ ಹೈ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಇರುವ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿದ್ದಾರೆ. ಅನಧಿಕೃತ ಟ್ಯೂಷನ್ ಕಂಡು ಬಂದರೆ ಅಥವಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಎಚ್ಚರವಹಿಸಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲಾಗುತ್ತದೆ ಎಂದು ಮಂಡ್ಯದಲ್ಲಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ಯೂಷನ್‌ಗೆ ತೆರಳಿದ್ದ ಬಾಲಕಿ ಮೇಲೆ ಎರಗಿದ್ದ ಕೀಚಕ ಕಾಂತರಾಜು, ಜ್ಞಾನ ಕುಟೀರ ಟ್ಯೂಷನ್ ಸೆಂಟರ್‌ನಲ್ಲಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಆದರೆ, ಆತ ಶಿಕ್ಷಕನೇ ಅಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಆತ ಓದಿದ್ದು ಕೇವಲ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ. ಇತ್ತ ಟ್ಯೂಷನ್ ಸೆಂಟರ್‌ಗೂ ಯಾವುದೇ ಅನುಮತಿಯು ಇಲ್ಲ. ಇಂತಹ ಟ್ಯೂಷನ್‌ಗಳ ಮೇಲೆ ಎಚ್ಚರ ವಹಿಸಿ.
-ಜವರೇಗೌಡ, ಡಿಡಿಪಿಐ

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago