ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ.
ಮೃತ ಗಣೇಶ ಹಾಗೂ ಸಹಪಾಟಿಗಳು ಈಶ್ವರ ದೇವಸ್ಥಾನ ಕಟ್ಟಡದ ಕೆಲಸ ಮಾಡಲು ತಮಿಳುನಾಡಿನಿಂದ ಆಗಮಿಸಿದ್ದರು. ಶುಕ್ರವಾರ ಈಶ್ವರ ದೇವಸ್ಥಾನದ ಬಳಿ ನೀರಿನ ತೊಟ್ಟಿನಲ್ಲಿ ನೀರು ತೆಗೆದುಕೊಳ್ಳುವ ವೇಳೆ ಗಣೇಶನಿಗೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾನೆ.
ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಶವ ಪರೀಕ್ಷೆ ನಂತರ ವಾರಸುದಾರರಿಗೆ ನೀಡಲಾಯಿತು.
ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…