ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳುತ್ತಿದ್ದ ಸವಿತಾ ಎಂಬಾಕೆ ಮಳವಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದಾಗ ತನ್ನ ಏಳು ತಿಂಗಳ ಮಗುವನ್ನು ಅಪರಿಚಿತ ಮಹಿಳೆ ಎತ್ತಿಕೊಂಡು ಹೊರಟು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದರು. ಬಸ್ನಲ್ಲಿ ಜನಸಂದಣಿ ಇದ್ದ ಕಾರಣ ಸೀಟ್ನಲ್ಲಿ ಕುಳಿತಿದ್ದ ಮಹಿಳೆಗೆ ಮಗು ಹಿಡಿದುಕೊಳ್ಳಲು ಕೊಟಿದ್ದೆ ಎಂದು ಹೇಳಿದ್ದರು.
ಈ ವಿಷಯ ತಿಳಿದ ಕೂಡಲೇ ಪಟ್ಟಣ ಪೊಲೀಸರು ಆರೋಪಿಯ ಪತ್ತೆಗೆ ಕ್ರಮವನ್ನೂ ಸಹ ಕೈಗೊಂಡಿದ್ದರು. ಇನ್ನು ಬಸ್ನಲ್ಲಿದ್ದ ಸಹ ಪ್ರಯಾಣಿಕರು ಹಾಗೂ ಸ್ಥಳೀಯರು ಸವಿತಾಳನ್ನು ಸಂತೈಸಿದ್ದರು. ಆದರೆ ಈ ಪ್ರಕರಣಕ್ಕೀಗ ದೊಡ್ಡ ತಿರುವೊಂದು ಸಿಕ್ಕಿದ್ದು, ಅಸಲಿ ವಿಷಯ ಹೊರಬಿದ್ದಿದೆ.
ಹೌದು, ಅಸಲಿಗೆ ಆರೋಪ ಮಾಡಿದ್ದ ಸವಿತಾಗೆ ಮಗು ಇಲ್ಲ ಎಂಬ ವಿಷಯ ನಂತರದ ತನಿಖೆಯಿಂದ ತಿಳಿದುಬಂದಿದೆ. ಇನ್ನು ಮಗು ಹುಡುಕಲು ಆಕೆ ನೀಡಿದ್ದ ಫೋಟೊ ಸಹ ಬೇರೆ ಮಗುವಿನದ್ದು ಎಂಬ ಅಂಶ ತಿಳಿದುಬಂದಿದ್ದು, ಆ ಮಗುವಿನ ತಂದೆ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…