ಜಿಲ್ಲೆಗಳು

ಮಳವಳ್ಳಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಗು ಕಳುವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!‌

ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಸವಿತಾ ಎಂಬಾಕೆ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿದಾಗ ತನ್ನ ಏಳು ತಿಂಗಳ ಮಗುವನ್ನು ಅಪರಿಚಿತ ಮಹಿಳೆ ಎತ್ತಿಕೊಂಡು ಹೊರಟು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದರು. ಬಸ್‌ನಲ್ಲಿ ಜನಸಂದಣಿ ಇದ್ದ ಕಾರಣ ಸೀಟ್‌ನಲ್ಲಿ ಕುಳಿತಿದ್ದ ಮಹಿಳೆಗೆ ಮಗು ಹಿಡಿದುಕೊಳ್ಳಲು ಕೊಟಿದ್ದೆ ಎಂದು ಹೇಳಿದ್ದರು.

ಈ ವಿಷಯ ತಿಳಿದ ಕೂಡಲೇ ಪಟ್ಟಣ ಪೊಲೀಸರು ಆರೋಪಿಯ ಪತ್ತೆಗೆ ಕ್ರಮವನ್ನೂ ಸಹ ಕೈಗೊಂಡಿದ್ದರು. ಇನ್ನು ಬಸ್‌ನಲ್ಲಿದ್ದ ಸಹ ಪ್ರಯಾಣಿಕರು ಹಾಗೂ ಸ್ಥಳೀಯರು ಸವಿತಾಳನ್ನು ಸಂತೈಸಿದ್ದರು. ಆದರೆ ಈ ಪ್ರಕರಣಕ್ಕೀಗ ದೊಡ್ಡ ತಿರುವೊಂದು ಸಿಕ್ಕಿದ್ದು, ಅಸಲಿ ವಿಷಯ ಹೊರಬಿದ್ದಿದೆ.

ಹೌದು, ಅಸಲಿಗೆ ಆರೋಪ ಮಾಡಿದ್ದ ಸವಿತಾಗೆ ಮಗು ಇಲ್ಲ ಎಂಬ ವಿಷಯ ನಂತರದ ತನಿಖೆಯಿಂದ ತಿಳಿದುಬಂದಿದೆ. ಇನ್ನು ಮಗು ಹುಡುಕಲು ಆಕೆ ನೀಡಿದ್ದ ಫೋಟೊ ಸಹ ಬೇರೆ ಮಗುವಿನದ್ದು ಎಂಬ ಅಂಶ ತಿಳಿದುಬಂದಿದ್ದು, ಆ ಮಗುವಿನ ತಂದೆ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ

andolana

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

6 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

6 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

9 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

10 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

12 hours ago