ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿಯಾಗುತ್ತೇವೆ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…