ಜಿಲ್ಲೆಗಳು

ಮಳವಳ್ಳಿಯ ಅತ್ಯಾಚಾರ, ಕೊಲೆ ಪ್ರಕರಣ : ಮೈಸೂರು ವಿವಿ ಸಂಘದಿಂದ ಬಾಲಕಿಗೆ ಶ್ರದ್ಧಾಂಜಲಿ ಸಭೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ  ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿಯಾಗುತ್ತೇವೆ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

andolanait

Recent Posts

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

15 mins ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

46 mins ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

1 hour ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

1 hour ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

4 hours ago