ಜಿಲ್ಲೆಗಳು

ಮಳವಳ್ಳಿಯ ಅತ್ಯಾಚಾರ, ಕೊಲೆ ಪ್ರಕರಣ : ಮೈಸೂರು ವಿವಿ ಸಂಘದಿಂದ ಬಾಲಕಿಗೆ ಶ್ರದ್ಧಾಂಜಲಿ ಸಭೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ  ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿಯಾಗುತ್ತೇವೆ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

4 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago