ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿಯಾಗುತ್ತೇವೆ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…