ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ ಮಾಡಿಸಲು 50ರೂ ಟಿಕೆಟ್ ಮಾತ್ರ ಪಡೆಯಬೇಕೆಂದು ನಾಮಫಲಕದಲ್ಲಿದೆ. ಟಿಕೆಟ್ ಪಡೆದುಕೊಂಡು ಮುಡಿ ಮಾಡಿಸಲು ಹೋಗುವ ಭಕ್ತರನ್ನು ಮುಡಿ ಮಾಡುವವರು ಮೊದಲೇ ಇಂತಿಷ್ಟು ಹಣ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರಿಗೆ ಧಮಕಿಯನ್ನು ಹಾಕಿ ಎದುರಿಸುತ್ತಿದ್ದಾರೆ, ಹಣ ನೀಡದಿದ್ದರೆ ಮುಡಿಯನ್ನು ಸರಿಯಾಗಿ ಮಾಡದೆ ಯದ್ವ ತದ್ವ ರಕ್ತ ಬರುವ ರೀತಿ ಮುಡಿ ಮಾಡುತ್ತಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅನಿಲ್ ಕುಮಾರ್ ಎಂಬುವರು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಟಿ ಕೋಟಿ ಆದಾಯ ಬಂದ್ರು ನಮ್ಮ ಕೂದಲು ಕೊಡಕ್ಕೆ ದುಡ್ಡು ಕೊಡಬೇಕು ಇನ್ನು ಇವರೆಲ್ಲ ಹೇಗೆ ಅಭಿವೃದ್ಧಿ ಮಾಡುತ್ತಾರೆ. ಶ್ರೀ ಕ್ಷೇತ್ರದಲ್ಲಿ ನಿಮ್ಮಿಂದ ಭಕ್ತರಿಗೆ ಯಾವುದಾದರೂ ಒಂದು ಉಚಿತ ಸೇವೆ ಅಂತ ಏನಾದರೂ ಇದ್ದರೆ ಹೇಳಿ ನಾಚಿಕೆ ಆಗಬೇಕು ನಿಮಗೆ ದೇವರ ಹೆಸರಲ್ಲಿ ದುಡ್ಡು ಮಾಡುತ್ತಿರುವ ನಿಮಗೆ ದೇವರೇ ಬುದ್ಧಿ ಕಲಿಸುತ್ತಾನೆ ನೋಡಿರಿ ಎಂದು ಪೋಸ್ಟ್ ಮಾಡಿದ್ದಾರೆ.
ಮುಡಿ ಮಾಡಲು ಟಿಕೆಟ್ ಮಾತ್ರ ಪಡೆಯಬೇಕು ಹೆಚ್ಚಿನ ಹಣ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಈ ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಸೂಚನೆ ನೀಡುತ್ತೇನೆ.
ಕಾತ್ಯಾಯಿನಿ ದೇವಿ
ಕಾರ್ಯದರ್ಶಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…