ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ಮುಡಿ ತೆಗೆಯಲು ಹೆಚ್ಚಿನ ಹಣ ವಸೂಲಿ – ಭಕ್ತರ ಆರೋಪ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ ಮಾಡಿಸಲು 50ರೂ ಟಿಕೆಟ್ ಮಾತ್ರ ಪಡೆಯಬೇಕೆಂದು ನಾಮಫಲಕದಲ್ಲಿದೆ. ಟಿಕೆಟ್ ಪಡೆದುಕೊಂಡು ಮುಡಿ ಮಾಡಿಸಲು ಹೋಗುವ ಭಕ್ತರನ್ನು ಮುಡಿ ಮಾಡುವವರು ಮೊದಲೇ ಇಂತಿಷ್ಟು ಹಣ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರಿಗೆ ಧಮಕಿಯನ್ನು ಹಾಕಿ ಎದುರಿಸುತ್ತಿದ್ದಾರೆ, ಹಣ ನೀಡದಿದ್ದರೆ ಮುಡಿಯನ್ನು ಸರಿಯಾಗಿ ಮಾಡದೆ ಯದ್ವ ತದ್ವ ರಕ್ತ ಬರುವ ರೀತಿ ಮುಡಿ ಮಾಡುತ್ತಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಿಲ್ ಕುಮಾರ್ ಎಂಬುವರು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಟಿ ಕೋಟಿ ಆದಾಯ ಬಂದ್ರು ನಮ್ಮ ಕೂದಲು ಕೊಡಕ್ಕೆ ದುಡ್ಡು ಕೊಡಬೇಕು ಇನ್ನು ಇವರೆಲ್ಲ ಹೇಗೆ ಅಭಿವೃದ್ಧಿ ಮಾಡುತ್ತಾರೆ. ಶ್ರೀ ಕ್ಷೇತ್ರದಲ್ಲಿ ನಿಮ್ಮಿಂದ ಭಕ್ತರಿಗೆ ಯಾವುದಾದರೂ ಒಂದು ಉಚಿತ ಸೇವೆ ಅಂತ ಏನಾದರೂ ಇದ್ದರೆ ಹೇಳಿ ನಾಚಿಕೆ ಆಗಬೇಕು ನಿಮಗೆ ದೇವರ ಹೆಸರಲ್ಲಿ ದುಡ್ಡು ಮಾಡುತ್ತಿರುವ ನಿಮಗೆ ದೇವರೇ ಬುದ್ಧಿ ಕಲಿಸುತ್ತಾನೆ ನೋಡಿರಿ ಎಂದು ಪೋಸ್ಟ್ ಮಾಡಿದ್ದಾರೆ.


ಮುಡಿ ಮಾಡಲು ಟಿಕೆಟ್ ಮಾತ್ರ ಪಡೆಯಬೇಕು ಹೆಚ್ಚಿನ ಹಣ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಈ ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಸೂಚನೆ ನೀಡುತ್ತೇನೆ.

ಕಾತ್ಯಾಯಿನಿ ದೇವಿ

ಕಾರ್ಯದರ್ಶಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

andolanait

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

6 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

42 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

56 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago